Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...