Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...