Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...