Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...