Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...