Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...