Homeಮುಖಪುಟಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

ಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ನಾಳೆ (ಸೆ.14) ಒಕ್ಕೂಟ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡಲಿದ್ದು, ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ಕೂಡ ವ್ಯಕ್ತವಾಗುತ್ತಿದೆ. ಇದೇ ವೇಳೆ ತಮಿಳು ಭಾಷೆಯನ್ನು “ದೇವರ ಭಾಷೆ” ಎಂದು ಮದ್ರಾಸ್ ಹೈಕೋರ್ಟ್ ಕೊಂಡಾಡಿದೆ.

ದೇಶದಾದ್ಯಂತ ದೇವಾಲಯದ ಪವಿತ್ರೀಕರಣ/ಪ್ರತಿಷ್ಠಾಪನೆಯನ್ನು ಅರುಣಗಿರಿನಾಥರು, ಅಜ್ವರರು ಮತ್ತು ನಾಯನ್ಮಾರ್‌ಗಳಂತಹ ಸಂತರು ರಚಿಸಿದ ತಮಿಳು ಸ್ತೋತ್ರಗಳನ್ನು ಪಠಿಸುವ ಮೂಲಕ ನಡೆಸಬೇಕು ಎಂದು ಹೇಳಿದೆ.

ಇತ್ತೀಚಿಗೆ ಅರ್ಜಿ ವಿಚಾರಣೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎನ್.ಕಿರುಬಾಕರನ್ ಮತ್ತು ನ್ಯಾಯಮೂರ್ತಿ ಬಿ.ಪುಗಲೆಂಧಿ ಅವರ ಪೀಠವು ಆದೇಶದಲ್ಲಿ ಈ ಹೇಳಿಕೆ ನೀಡಿದ್ದು, ನಮ್ಮ ದೇಶದಲ್ಲಿ ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

ತಮಿಳು ಶೈವ ಮಂತ್ರಂ (ಸ್ತುತಿಗೀತೆಗಳು) ಮತ್ತು ಸಂತ ಅಮರಾವತಿ ಆತರಂಗರೈ ಕರೂರರ ಹಾಡುಗಳೊಂದಿಗೆ ಕರೂರು ಜಿಲ್ಲೆಯ ಅರುಲ್ಮಿಗು ಪಶುಪತೇಶ್ವರ ಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

“ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ಭಾಷೆಯಲ್ಲಿ ಆರಾಧನೆ ನಡೆಯುತ್ತದೆ. ನಮ್ಮ ದೇಶದಲ್ಲಿ, ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ. ಬೇರೆ ಯಾವುದೇ ಭಾಷೆ ಅದಕ್ಕೆ ಸಮನಲ್ಲ ಎಂದು ಬಿಂಬಿಸಲಾಗಿದೆ. ನಿಸ್ಸಂದೇಹವಾಗಿ, ಸಂಸ್ಕೃತ ಅಗಾಧವಾದ ಪ್ರಾಚೀನ ಸಾಹಿತ್ಯವನ್ನು ಹೊಂದಿರುವ ಪ್ರಾಚೀನ ಭಾಷೆ. ಆದರೆ, ಸಂಸ್ಕೃತದಲ್ಲಿ ವೇದಗಳನ್ನು ಪಠಿಸಿದರೆ ಮಾತ್ರ ದೇವರುಗಳು ಭಕ್ತರ ಪ್ರಾರ್ಥನೆಯನ್ನು ಕೇಳುತ್ತಾರೆ ಎಂಬ ನಂಬಿಕೆಯನ್ನು ಹರಡಲಾಗಿದೆ” ಎಂದು ಪೀಠ ಹೇಳಿದೆ.

ಜನರು ಮಾತನಾಡುವ ಪ್ರತಿಯೊಂದು ಭಾಷೆಯೂ ದೇವರ ಭಾಷೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. “ಮನುಷ್ಯನು ಭಾಷೆಯನ್ನು ಸೃಷ್ಟಿಸಲು ಸಾಧ್ಯವಿಲ್ಲ. ಭಾಷೆಗಳು ಶತಮಾನಗಳಿಂದ ಅಸ್ತಿತ್ವದಲ್ಲಿವೆ. ಒಂದು ತಲೆಮಾರಿನಿಂದ ಇನ್ನೊಂದು ಪೀಳಿಗೆಗೆ ವರ್ಗಾವಣೆಯಾಗಿವೆ. ಅಸ್ತಿತ್ವದಲ್ಲಿರುವ ಭಾಷೆಗಳಲ್ಲಿ ಮಾತ್ರ ಸುಧಾರಣೆಯಾಗಬಹುದು. ಆದರೆ ಯಾವುದೇ ಭಾಷೆಯ ಸೃಷ್ಟಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು, ತಮಿಳುನಾಡಿನ ಜೊತೆ ಒಕ್ಕೂಟ ಸರ್ಕಾರ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆ ಬಳಸಬೇಕು. ಹಿಂದಿ ಬಳಸಕೂಡದು ಎಂದು ಮದ್ರಾಸ್ ಹೈಕೋರ್ಟ್ ಮಧುರೈ ಪೀಠ ಇತ್ತಿಚೆಗೆ ತೀರ್ಪು ನೀಡಿದೆ.

ರಾಜ್ಯಗಳೊಂದಿಗೆ ಸಂವಹನ ನಡೆಸುವಾಗ ಅಧಿಕೃತ ಭಾಷೆಗಳ ಕಾಯ್ದೆ, 1963ರ ನಿಯಮಗಳನ್ನು ಪಾಲಿಸಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಮಧುರೈ ನ್ಯಾಯಪೀಠ ಸೂಚನೆ ನೀಡಿತ್ತು.


ಇದನ್ನೂ ಓದಿ: ಸಿಎಎ ಹಿಂಪಡೆಯುವಂತೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ಅಸೆಂಬ್ಲಿ: ಬಿಜೆಪಿ ಮಿತ್ರ ಪಕ್ಷದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...