Homeಅಂಕಣಗಳುಬಹುಜನ ಭಾರತ; ದೆಹಲಿಯಲ್ಲೊಂದು ಅಜ್ಞಾತ ತಮಿಳ್ಕನ್ನಡಿಗ ಲೋಕ!

ಬಹುಜನ ಭಾರತ; ದೆಹಲಿಯಲ್ಲೊಂದು ಅಜ್ಞಾತ ತಮಿಳ್ಕನ್ನಡಿಗ ಲೋಕ!

- Advertisement -
- Advertisement -

1984ರಲ್ಲಿ ಇಂದಿರಾ ಹತ್ಯೆ ಜರುಗಿದ ನಂತರ ಸಿಖ್ಖರ ಸಾಮೂಹಿಕ ಮಾರಣಹೋಮದ ರಣಭೂಮಿ ಆದದ್ದು ಪೂರ್ವೀ ದೆಹಲಿಯ ತ್ರಿಲೋಕಪುರಿ ಮತ್ತು ನೆರೆಹೊರೆಯ ಕಲ್ಯಾಣಪುರಿ. ಕಾಂಗ್ರೆಸ್ಸಿನ ತಲೆಯಾಳುಗಳೇ ಈ ಮಾರಣಹೋಮದ ನೇತೃತ್ವ ವಹಿಸಿದ್ದರು.

ನೆಹರೂ ಮತ್ತು ಇಂದಿರಾ ಕಾಲದಲ್ಲಿ ದೆಹಲಿಯ ಕೊಳೆಗೇರಿಗಳನ್ನು ಕೆಡವಿದ ನಂತರ ನಿರಾಶ್ರಿತರಾದ ದೀನದಲಿತರಿಗೆ ಪುನರ್ವಸತಿ ಕಲ್ಪಿಸಿದ್ದು ತ್ರಿಲೋಕಪುರಿ ಮತ್ತು ಪಕ್ಕದ ಕಲ್ಯಾಣಪುರಿಯಲ್ಲಿ. ಸಂಜಯಗಾಂಧೀ ಬುಲ್ಡೋಜರ್ ನೆಲಸಮ ಮಾಡಿದ ತುರ್ಕಮಾನ ಗೇಟಿನ ಕೊಳೆಗೇರಿಗಳ ಬಡ ಮುಸಲ್ಮಾನರನ್ನೂ ಇದೇ ತ್ರಿಲೋಕಪುರಿಗೆ ತಂದು ಒಗೆಯಲಾಗಿತ್ತು.

ಆ ಕಾಲಕ್ಕೆ ನೀರು, ಬೆಳಕು, ನೆರಳಿನ ಯಾವುದೇ ನಾಗರಿಕ ಸೌಲಭ್ಯಗಳ ಸುಳಿವೂ ಇಲ್ಲದ ಈ ಬರಡು ಬಂಜರು ನೆಲದಲ್ಲಿ ದಲಿತರು, ಹಿಂದುಳಿದವರು, ಮುಸಲ್ಮಾನರು ಕಾಲಕ್ರಮೇಣ ತಮ್ಮ ಬಡಬದುಕುಗಳನ್ನು ಕಟ್ಟಿಕೊಂಡರು.

ಪೂರ್ವ ದೆಹಲಿಯ ತ್ರಿಲೋಕಪುರಿ, ಕಲ್ಯಾಣಪುರಿ ಹಾಗೂ ವಾಯುವ್ಯ ದೆಹಲಿಯ ಮಂಗೋಲ್ ಪುರಿಯಲ್ಲಿ ಐದಾರೂ ಸಾವಿರಕ್ಕೂ ಹೆಚ್ಚು ಮಂದಿ ಕನ್ನಡಿಗರು ನೆಲೆಸಿದ್ದಾರೆ. ಇವರೆಲ್ಲ ತಮಿಳುನಾಡಿನಿಂದ ವಲಸೆ ಬಂದವರು. ತಮಿಳರ ಪಾಲಿಗೆ ಇವರು ’ಕನ್ನಡಕಾರ’ರು. ಆದರೆ ಕರ್ನಾಟಕದ ಕನ್ನಡಿಗರಿರಲಿ, ಕರ್ನಾಟಕದ ಕನ್ನಡಿಗರು ಕೂಡ ಈ ’ಕನ್ನಡಕಾರರ’ ಇರವನ್ನೇ ಅರಿಯರು. ಹೊರನಾಡ ಕನ್ನಡಿಗರು ಎಂಬ ಸ್ಥಾನಮಾನವಾಗಲಿ, ಅದರ ವ್ಯಾಖ್ಯೆಯಾಗಲಿ ಇವರ ಬಳಿ ಸುಳಿದೇ ಇಲ್ಲ. 1948ರಷ್ಟು ಹಿಂದೆಯೇ ಹುಟ್ಟಿದ ಹೆಸರಾಂತ ಸಂಸ್ಥೆ ದೆಹಲಿ ಕರ್ನಾಟಕ ಸಂಘ. ಕೊಳೆಗೇರಿಯ ಈ ಬಡ ದೆಹಲಿ ’ಕನ್ನಡಕಾರ’ರ ಸಂಗತಿ ಸಂಘದ ಗಮನಕ್ಕೆ ಬಂದು ಐದಾರು ವರ್ಷಗಳೇ ಉರುಳಿವೆ. ಸಂಘ ಅವರ ಕುರಿತು ಕನಿಷ್ಠ ಕುತೂಹಲವನ್ನೂ ತೋರಿಲ್ಲ. ಅವರೂ ನಾವು ಕನ್ನಡಿಗರೆಂದು ಹೇಳಿಕೊಂಡು ಸಂಘದ ಬಳಿ ಸಾರುವ ಸಾಹಸ ಮಾಡಿಲ್ಲ.

ಡೆಲ್ಲಿ ಕನ್ನಡಸಂಘ ನಮ್ಮನ್ನು ಕರೆದಿಲ್ಲ, ನಾವು ಅವರ ಬಳಿ ಹೋಗಿಲ್ಲ. ತಮಿಳು ಸಂಘಂಗೆ ಹೋಗಿದ್ದೇವೆ. ಸದಸ್ಯರೂ ಆಗಿದ್ದೇವೆ. ಮಕ್ಕಳು ಡೆಲ್ಲಿಯ ತಮಿಳು ಶಾಲೆಗಳಿಗೆ ಹೋಗಿ ಕಲೀತಾರೆ. ತಮಿಳುನಾಡಿನಲ್ಲಿ ನಮ್ಮ ಸಂಖ್ಯೆ ಹತ್ತಿಪ್ಪತ್ತು ಲಕ್ಷವಾದರೂ ಇದ್ದೀತು ಎನ್ನುತ್ತಾರವರು.

ಬಹುತೇಕ ಮನೆಗೆಲಸದ ಪಾತ್ರೆ ತಿಕ್ಕುವವರಾಗಿ, ಅಡುಗೆ ಮಾಡುವವರಾಗಿ, ಡ್ರೈವರುಗಳಾಗಿ, ನೆರೆಯ ನೋಯ್ಡಾದ ಫ್ಯಾಕ್ಟರಿಗಳಲ್ಲಿ ಕೂಲಿಕಾರರಾಗಿ, ಟ್ರಾಫಿಕ್ ಸಿಗ್ನಲ್ಲುಗಳಲ್ಲಿ ಹೂವು ಮಾರುವವರಾಗಿ, ಸಣ್ಣಪುಟ್ಟ ವ್ಯಾಪಾರ ಮಾಡುವವರಾಗಿ ಹೊಟ್ಟೆ ಹೊರೆಯುತ್ತಿದ್ದಾರೆ ಈ ಕನ್ನಡಿಗರು. ಉತ್ತಮ ಉದ್ಯೋಗಗಳಲ್ಲಿ ನೆಮ್ಮದಿ ಕಂಡುಕೊಂಡಿರುವವರ ಸಂಖ್ಯೆ ಬೆರಳೆಣಿಕೆಯದು.

ಇವರ ಮನೆಮಾತು ಕನ್ನಡ. ನೂರಕ್ಕೆ ಅರವತ್ತು ಎಪ್ಪತ್ತು ಪದಗಳು ಕನ್ನಡ. ಉಳಿದವು ತಮಿಳು. ತಮ್ಮ ಮಾತೃಭಾಷೆ ಕನ್ನಡವೆಂದೇ ಸಾರಿ ಹೇಳುತ್ತಾರೆ. ತಮಿಳುನಾಡಿನಲ್ಲಿ ಇವರನ್ನು ’ಕನ್ನಡ ದೇವಾಂಗ ಚೆಟ್ಟಿಯಾರ್’ ಎಂದೇ ಕರೆಯಲಾಗುತ್ತದೆ. ನೇಯುವುದು ಇವರ ಮೂಲ ಕಸುಬು. 1967ರ ಆಸುಪಾಸಿನಲ್ಲಿ ದಿಲ್ಲಿಗೆ ವಲಸೆ ಬಂದವರಿವರು. ಮೊದಲ ಬಾರಿಗೆ ತಮಿಳುನಾಡಿನಲ್ಲಿ ಅಧಿಕಾರ ಹಿಡಿದ ಡಿ.ಎಂ.ಕೆ. ವಿದ್ಯುತ್ ಚಾಲಿತ ಮಗ್ಗಗಳ ಆರಂಭಕ್ಕೆ ಅನುಮತಿ ನೀಡಿದ ನಂತರ ನಿರ್ಗತಿಕರಾದ ಕೈಮಗ್ಗದ ನೇಕಾರರು ಇವರು. ವಿದ್ಯುತ್ ಮಗ್ಗಗಳು ತಮ್ಮ ಕಸುಬಿಗೆ ನೀಡಿದ ಕೊಡಲಿಯೇಟನ್ನು ಭರಿಸಲಾರದೆ ಹೊಟ್ಟೆ ಹೊರೆಯಲು ದಿಲ್ಲಿ, ಮುಂಬಯಿ, ಬೆಂಗಳೂರು ನಗರಗಳ ರೈಲುಗಳನ್ನು ಹತ್ತಿದ್ದವರು.

ತಿಂಗಳುಗಳು, ವರ್ಷದೊಪ್ಪತ್ತಿನ ಅಂತರದಲ್ಲಿ ಅಂದಿನ ದಿನಗಳಲ್ಲಿ ದಿಲ್ಲಿಗೆ ಬಂದಿಳಿದ ಕುಟುಂಬಗಳು ಹತ್ತಿರಹತ್ತಿರ ಸಾವಿರ ಎನ್ನುತ್ತಾರೆ ನಾಗಲಿಂಗಂ ಕನ್ನಡ ದೇವಾಂಗ ಚೆಟ್ಟಿಯಾರ್. ಒಂಬತ್ತು ವರ್ಷದ ಹುಡುಗನಾಗಿ ಪಂಜಾಬಿ ಚಹಾದ ಅಂಗಡಿಯಲ್ಲಿ ಕೆಲಸ ಮಾಡಿ ದಿಲ್ಲಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಅವರು.

ನಾಗಲಿಂಗಂ ಅವರನ್ನು ಎದುರಿಗೆ ಕೂರಿಸಿಕೊಂಡು ಮಾತನಾಡಿದರೆ ಅವರ ಕನ್ನಡದಲ್ಲಿ ನೂರಕ್ಕೆ ಅರವತ್ತು ಪದಗಳು ಮಾತ್ರವೇ ನಮಗೆ ತಿಳಿದಾವು. ಬೇರೆ ಕಸುಬೇ ಗೊತ್ತಿಲ್ಲದ ಈ ’ಕನ್ನಡಕಾರ’ರು, ದಿಲ್ಲಿಗೆ ಬಂದ ಆರಂಭದ ದಿನಗಳಲ್ಲಿ ನೆರೆಹೊರೆಯ ಪಾಣಿಪತ್, ಸೋನೆಪತ್, ಘಾಜಿಯಾಬಾದುಗಳ ಕೈಮಗ್ಗಗಳಲ್ಲಿ ಕೂಲಿ ಮಾಡುತ್ತಾರೆ. ತಮಿಳುನಾಡಿನಲ್ಲಿ ತಾವು ನೇಯುತ್ತಿದ್ದ ಸೀರೆಗಳ ಬದಲಿಗೆ ಇಲ್ಲಿ, ದುಪ್ಪಟಿ, ಕಂಬಳಿ ನೇಯ್ದರಂತೆ. ಈ ಮಗ್ಗಗಳೂ ಅಳಿದ ನಂತರ ಬಾಣಲೆಯಿಂದ ಬೆಂಕಿಗೆ ಬಿದ್ದು ಬೇರೆ ಅನ್ನದ ದಾರಿಗಳನ್ನು ಹುಡುಕಿಕೊಳ್ಳುತ್ತಾರೆ.

ಕರೋಲ್ ಬಾಗಿನ ಝುಗ್ಗಿ ಝೋಪಡಿಗಳಿಂದ ತೆರವು ಮಾಡಿಸುವ ಸರ್ಕಾರ ತ್ರಿಲೋಕಪುರಿ, ಮಂಗೋಲ್‌ಪುರಿ, ಇಂದ್ರಾಪುರಿಯಲ್ಲಿ ಪುಟ್ಟ ನಿವೇಶನ ನೀಡಿ ಸಾಗಹಾಕುತ್ತದೆ. ಇಂದಿನ ತ್ರಿಲೋಕಪುರಿಯಲ್ಲಿ ನೆಲೆಸಿರುವ ’ಕನ್ನಡಕಾರರ’ ಕುಟುಂಬಗಳ ಸಂಖ್ಯೆ ನಾನೂರಕ್ಕೂ ಹೆಚ್ಚು. ಕನ್ನಡ ದೇವಾಂಗ ಚೆಟ್ಟಿಯಾರರ ಕುಲದೈವ ಚೌಡೇಶ್ವರಿ. ಆಕೆಗೊಂದು ದೊಡ್ಡದೇ ಆದ ಗುಡಿ ಕಟ್ಟಿದ್ದಾರೆ.

ಕರ್ನಾಟಕದ ಹಂಪಿಯ ದಯಾನಂದ ಸ್ವಾಮಿ ಸರಸ್ವತಿ ಅವರ ಮಠವೇ ಇವರ ಮುಖ್ಯ ಮಠ. ತಮಿಳುನಾಡಿನಲ್ಲಿ ಕನ್ನಡ ದೇವಾಂಗ ಚೆಟ್ಟಿಯಾರರ ಗುಡಿಗಳ ಉದ್ಘಾಟನೆಗೆ ದಯಾನಂದ ಸ್ವಾಮಿ ಹೋಗುತ್ತಾರೆ. ತಮಿಳುನಾಡಿನಲ್ಲಿ ಇವರ ಸಂಸ್ಕೃತಿಯೇ ಬೇರೆ, ತಮಿಳು ಸಂಸ್ಕೃತಿಯೇ ಬೇರೆ. ಉಗಾದಿ ಕನ್ನಡದವರ ಹಬ್ಬವೆಂದು ಇವರಿಗೆ ಗೊತ್ತು. ಆದರೆ ಆಚರಿಸುವುದಿಲ್ಲ. ಯಾಕೆ ಅಂತ ಗೊತ್ತಿಲ್ಲ.

ತಮಿಳುನಾಡಿನಲ್ಲಿ ಕನ್ನಡಿಗ ದೇವಾಂಗ ಚೆಟ್ಟಿಯಾರರು ತಾವು ವಾಸಿಸುವ ಪ್ರದೇಶಗಳನ್ನು ಎರಡು ಸೀಮೆಗಳನ್ನಾಗಿ ವಿಂಗಡಿಸಿಕೊಂಡಿದ್ದಾರೆ. ಅರವತ್ತೂರು, ಮೂವತ್ತೂರು ಎಂಬ ಎರಡು ಸೀಮೆಗಳಲ್ಲಿ ಅರವತ್ತು ಮತ್ತು ಮೂವತ್ತು ಒಟ್ಟು ತೊಂಬತ್ತು ನಾನಾ ಊರುಗಳಲ್ಲಿ ಇವರ ವಾಸ.

ನೂರಾರು ವರ್ಷಗಳಿಂದ ತಮಿಳುನಾಡಿನಲ್ಲಿ ಬದುಕಿರುವ ಈ ಜನಾಂಗಕ್ಕೆ ತಮ್ಮ ಬೇರುಗಳ ಕುರಿತ ಅರಿವಿಲ್ಲ. ತಾವು ತಮಿಳುನಾಡಿನ ಮೂಲನಿವಾಸಿಗಳೇ ಅಥವಾ ವಲಸೆ ಬಂದವರೇ ಎಂಬುದು ಗೊತ್ತಿಲ್ಲ. ಮನೆಮನೆಗಳ ಹೊಸ್ತಿಲುಗಳ ಒಳಗೆ ಕನ್ನಡವನ್ನೂ, ಹೊರಗೆ ತಮಿಳನ್ನೂ ಮಾತಾಡುವ, ಶಾಲೆಗಳಲ್ಲಿ ಕನ್ನಡ ಕಲಿಯುವ ಅವಕಾಶವೇ ಇಲ್ಲದ, ಪತ್ರವ್ಯವಹಾರಗಳಲ್ಲಿ ಕನ್ನಡವನ್ನು ಬಳಸುತ್ತಿರುವ, ಆದರೆ ಅಂತಹ ಕನ್ನಡವನ್ನು ತಮಿಳು ಲಿಪಿಯಲ್ಲೇ ಬರೆಯುವ ಅನಿವಾರ್ಯ ಈ ’ಕನ್ನಡಕಾರ’ರದು.

ದಿಂಡಿಗಲ್, ಮಧುರೈ, ವಿರುಧನಗರ, ಶಿವಕಾಶಿ, ಸೇಲಂ, ಕೊಯಮತ್ತೂರು, ಈರೋಡು, ಕಾರೈಕುಡಿ, ಪ್ರದೇಶಗಳಲ್ಲಿ ನೆಲೆಸಿರುವ ಇವರಿಗೆ ವಿರುಧನಗರ ಜಿಲ್ಲೆಯ ಅರಪ್ಪುಕೋಟೈ ಎಂಬಲ್ಲಿ ತಮ್ಮದೇ ಜನಾಂಗ ನಡೆಸುವ ಶಿಕ್ಷಣ ಸಂಸ್ಥೆಗಳಿವೆ. ಆದರೆ ಅಲ್ಲಿ ಕನ್ನಡ ಕಲಿಸುವ ವ್ಯವಸ್ಥೆ ಇಲ್ಲ. ಅಲ್ಲಿ ಕನ್ನಡ ಅನ್ನ ಸಂಪಾದಿಸುವ ದಾರಿಯಲ್ಲ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....