Homeಮುಖಪುಟತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

- Advertisement -
- Advertisement -

ತಮಿಳುನಾಡಿನಲ್ಲಿ ಬುಧವಾರವೂ ಬಿಜೆಪಿಯ ಪಕ್ಷಾಂತರ ಪರ್ವ ಮುಂದುವರಿದಿದ್ದು, ಐಟಿ ವಿಭಾಗದ ಪದಾಧಿಕಾರಿ ಸೇರಿದಂತೆ ಪಕ್ಷದ 13 ಪದಾಧಿಕಾರಿಗಳು ಕೇಸರಿ ಪಕ್ಷವನ್ನು ತೊರೆದಿದ್ದಾರೆ.

ಬಿಜೆಪಿ ಪಕ್ಷದ ಪಶ್ಚಿಮ ಚೆನ್ನೈ ಘಟಕದಲ್ಲಿ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಓರತಿ ಅನ್ಬರಸು ಮತ್ತು ಇತರ 12 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ Orathi Anbarasu ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಮರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿಯಿಂದ 13 ಜನರು ಪಕ್ಷ ತೊರೆದಿದ್ದಾರೆ.

ಈ 13 ಜನರು ಕೂಡ ಈಗ ತಮ್ಮ “ನಾಯಕ” ಮತ್ತು ಮಾಜಿ ರಾಜ್ಯ ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರ ರಾಜಕೀಯ ಮಾರ್ಗವನ್ನು ಅನುಸರಿಸಿದ್ದಾರೆ. ನಿರ್ಮಲ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಎಐಎಡಿಎಂಕೆಗೆ ಸೇರಿದ್ದರು. ಪಕ್ಷದ ಇತರ ಕೆಲವು ಪದಾಧಿಕಾರಿಗಳು ಸಹ ಬಿಜೆಪಿ ತೊರೆದು ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಸೇರ್ಪಡೆಗೊಂಡರು, ಇದು ಎರಡು ಮಿತ್ರಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

”ದೀರ್ಘಕಾಲದಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ನಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದ. ಆದರ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ಪಕ್ಷದಲ್ಲಿನ “ಪಿತೂರಿಗಳಿಗೆ” ಬಲಿಯಾಗಲು ಬಯಸುವುದಿಲ್ಲ ಆದ್ದರಿಂದ ಬಿಜೆಪಿಯನ್ನು ತೊರೆಯುತ್ತಿದ್ದೇನೆ” ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಸರಸು ಅವರು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ”ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಇತರ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿರುವುದರಿಂದ, ಕೆಲವು ಎರಡನೇ ಅಥವಾ ಮೂರನೇ ಹಂತದ ನಾಯಕರು ಪಕ್ಷವನ್ನು ತೊರೆಯುವ ವಿಷಯವು ದೊಡ್ಡ ಆಯಾಮವನ್ನು ಪಡೆದುಕೊಂಡಿದೆ” ಎಂದು ಹೇಳಿದರು.

”ಕೆಲವು ದೊಡ್ಡ ನಾಯಕರು ಬಿಜೆಪಿ ತೊರೆದು ಮೂರು ತಿಂಗಳ ನಂತರ ದೊಡ್ಡ ನಾಯಕರು ಪಕ್ಷಕ್ಕೆ ಬರುವ ಸಾಧ್ಯತೆಗಳಿವೆ ಎಂದರು. ನಾನು ಅಣ್ಣಾಮಲೈ ಹೆಸರಿನ ಹಿಂದೆ ಎಂಪಿ ಅಥವಾ ಎಂಎಲ್‌ಎ ಟ್ಯಾಗ್ ಹೊಂದಲು ಬಿಜೆಪಿಗೆ ಸೇರಿಲ್ಲ, ಪಕ್ಷದ ಬೆಳವಣಿಗೆಗಾಗಿ ಸೇರಿದ್ದಾನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...