Homeಮುಖಪುಟತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

- Advertisement -
- Advertisement -

ತಮಿಳುನಾಡಿನಲ್ಲಿ ಬುಧವಾರವೂ ಬಿಜೆಪಿಯ ಪಕ್ಷಾಂತರ ಪರ್ವ ಮುಂದುವರಿದಿದ್ದು, ಐಟಿ ವಿಭಾಗದ ಪದಾಧಿಕಾರಿ ಸೇರಿದಂತೆ ಪಕ್ಷದ 13 ಪದಾಧಿಕಾರಿಗಳು ಕೇಸರಿ ಪಕ್ಷವನ್ನು ತೊರೆದಿದ್ದಾರೆ.

ಬಿಜೆಪಿ ಪಕ್ಷದ ಪಶ್ಚಿಮ ಚೆನ್ನೈ ಘಟಕದಲ್ಲಿ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಓರತಿ ಅನ್ಬರಸು ಮತ್ತು ಇತರ 12 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ Orathi Anbarasu ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಮರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿಯಿಂದ 13 ಜನರು ಪಕ್ಷ ತೊರೆದಿದ್ದಾರೆ.

ಈ 13 ಜನರು ಕೂಡ ಈಗ ತಮ್ಮ “ನಾಯಕ” ಮತ್ತು ಮಾಜಿ ರಾಜ್ಯ ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರ ರಾಜಕೀಯ ಮಾರ್ಗವನ್ನು ಅನುಸರಿಸಿದ್ದಾರೆ. ನಿರ್ಮಲ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಎಐಎಡಿಎಂಕೆಗೆ ಸೇರಿದ್ದರು. ಪಕ್ಷದ ಇತರ ಕೆಲವು ಪದಾಧಿಕಾರಿಗಳು ಸಹ ಬಿಜೆಪಿ ತೊರೆದು ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಸೇರ್ಪಡೆಗೊಂಡರು, ಇದು ಎರಡು ಮಿತ್ರಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

”ದೀರ್ಘಕಾಲದಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ನಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದ. ಆದರ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ಪಕ್ಷದಲ್ಲಿನ “ಪಿತೂರಿಗಳಿಗೆ” ಬಲಿಯಾಗಲು ಬಯಸುವುದಿಲ್ಲ ಆದ್ದರಿಂದ ಬಿಜೆಪಿಯನ್ನು ತೊರೆಯುತ್ತಿದ್ದೇನೆ” ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಸರಸು ಅವರು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ”ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಇತರ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿರುವುದರಿಂದ, ಕೆಲವು ಎರಡನೇ ಅಥವಾ ಮೂರನೇ ಹಂತದ ನಾಯಕರು ಪಕ್ಷವನ್ನು ತೊರೆಯುವ ವಿಷಯವು ದೊಡ್ಡ ಆಯಾಮವನ್ನು ಪಡೆದುಕೊಂಡಿದೆ” ಎಂದು ಹೇಳಿದರು.

”ಕೆಲವು ದೊಡ್ಡ ನಾಯಕರು ಬಿಜೆಪಿ ತೊರೆದು ಮೂರು ತಿಂಗಳ ನಂತರ ದೊಡ್ಡ ನಾಯಕರು ಪಕ್ಷಕ್ಕೆ ಬರುವ ಸಾಧ್ಯತೆಗಳಿವೆ ಎಂದರು. ನಾನು ಅಣ್ಣಾಮಲೈ ಹೆಸರಿನ ಹಿಂದೆ ಎಂಪಿ ಅಥವಾ ಎಂಎಲ್‌ಎ ಟ್ಯಾಗ್ ಹೊಂದಲು ಬಿಜೆಪಿಗೆ ಸೇರಿಲ್ಲ, ಪಕ್ಷದ ಬೆಳವಣಿಗೆಗಾಗಿ ಸೇರಿದ್ದಾನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...