Homeಮುಖಪುಟಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿ, "ಸಾಂಕ್ರಾಮಿಕ ರೋಗದ ಮಧ್ಯೆ ನೀಟ್ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ" ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತ್ತು.

- Advertisement -
- Advertisement -

ಇಂದು ಆರಂಭವಾಗಿರುವ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೆಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ತಮಿಳುನಾಡಿನ ತಿರುಚೆಂಗೋಡ್ ನಗರದ ವ್ಯಾಪಾರಿಯ ಮಗನಾದ ಮೋತಿಲಾಲ್ ಎಂಬ 20 ವರ್ಷದ ಯುವಕ ಕಳೆದ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಲಿಲ್ಲ. ಹಾಗಾಗಿ ಇಂದು ನಡೆಯುವ ಪರೀಕ್ಷೆಗೆ ಹಾಜರಾಗಬೇಕಿದ್ದ ಯುವಕ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ ಜೋತಿಶ್ರೀ ಮತ್ತು ಧರ್ಮಪುರಿಯ ವ್ಯಾಪಾರಿಯ ಮಗನಾದ ಆದಿತ್ಯ ಎಂಬ ವಿದ್ಯಾರ್ಥಿಗಳು ಸಹ ನಿನ್ನೆ ಶವವಾಗಿ ಪತ್ತೆಯಾಗಿದ್ದಾರೆ.

“ಕಳೆದ ವರ್ಷ ಪ್ರವೇಶ ಪರೀಕ್ಷೆ ಬರೆದು, ವೈಟಿಂಗ್ ಲಿಸ್ಟ್‌ಗಾಗಿ ಕಾಯುತ್ತಿದ್ದ ಮಧುರೈನ 19 ವರ್ಷದ ಯುವತಿ ಸೇರಿದಂತೆ, ಕಳೆದ ವರ್ಷ ಖಾಸಗೀ ಕಾಲೇಜಿನಲ್ಲಿಯೂ ಪ್ರವೇಶ ಸಿಗದ ರೈತನ ಮಗನಾದ ವಿಗ್ನೇಶ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜೋತಿಶ್ರೀ ಎನ್ನುವ ಯುವತಿ ಬರೆದಿರುವ ಆತ್ಮಹತ್ಯಾ ಪತ್ರದಲ್ಲಿ, “ನಾನು ಪರೀಕ್ಷೆಗೆ ಚೆನ್ನಾಗಿಯೇ ಸಿದ್ಧತೆ ಮಾಡಿಕೊಂಡಿದ್ದೇನೆ. ಆದರೂ ನನಗೆ ಭಯವಾಗುತ್ತಿದೆ. ಆದರೆ, ವೈದ್ಯಕೀಯ ಸೀಟ್ ಪಡೆಯದಿದ್ದರೆ, ನಾನು ಏನು ಮಾಡಲಿ” ಎಂದು ಬರೆದುಕೊಂಡಿದ್ದಾಳೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸದಿರುವಂತೆ ಅಥವಾ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿ, ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಸೀಟ್‌ಗಳನ್ನು ಹಂಚುವಂತೆ ತಮಿಳುನಾಡು ಕೇಳಿಕೊಂಡಿತ್ತು.

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಪಿಎಂಕೆ ಸಂಸ್ಥಾಪಕ ಎಸ್.ರಾಮದಾಸ್ ಇದಕ್ಕೆ ಸಂಬಂಧಿಸಿದಂತೆ, “ನೀಟ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬೇಕು. ಇದು ಮಾತ್ರ ಪರಿಹಾರ” ಎಂದು ಬುಧವಾರ ಹೇಳಿದ್ದರು.

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಪ್ರಬಲವಾಗಿ ಒತ್ತಾಯಿಸುತ್ತಿರುವವರಲ್ಲಿ ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಕೂಡ ಒಬ್ಬರು. “ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನವನ್ನು ಅಸ್ಥಿರಗೊಳಿಸುತ್ತದೆ” ಎಂದು ಅವರು ಹೇಳಿದ್ದರು.

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿ, “ಸಾಂಕ್ರಾಮಿಕ ರೋಗದ ಮಧ್ಯೆ ನೀಟ್ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ” ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತ್ತು.

ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಕಳೆದ ಒಂದು ದಶಕದಿಂದ ತಿರಸ್ಕರಿಸುತ್ತಿರುವ ತಮಿಳುನಾಡು, “ಇದು ವಿದ್ಯಾರ್ಥಿಗಳನ್ನು ಒತ್ತಡಕ್ಕೆ ಸಿಲುಕಿಸುತ್ತದೆ ಮತ್ತು ಬಡ ವಿದ್ಯಾರ್ಥಿಗಳಿಗೆ ಈ ದುಬಾರಿ ಕೋಚಿಂಗ್ ಅನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೊಂಡುಬಂದಿದೆ.

ನೀಟ್‌ಗೂ ಮೊದಲು ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಸೀಟುಗಳನ್ನು ಪಡೆಯುತ್ತಿದ್ದರು. ಯುಪಿಎ ಆಡಳಿತದಲ್ಲಿ, ತಮಿಳುನಾಡು ರಾಜ್ಯವು ನೀಟ್‌ನಿಂದ ವಿನಾಯಿತಿಯನ್ನು ಪಡೆದಿತ್ತು. ಆದರೆ ಎನ್‌ಡಿಎ ಸರ್ಕಾರ ಈ ವಿನಾಯಿತಿಯನ್ನು ರದ್ದುಗೊಳಿಸಿದೆ.

ತಿರುಪ್ಪರಂಕುಂಡ್ರಂನ ಡಿಎಂಕೆ ಶಾಸಕ ಪಿ.ಸರವಣನ್, “ಖಿನ್ನತೆ ಮತ್ತು ನೀಟ್‌ನ ಭಯವು ತಮಿಳುನಾಡಿನಲ್ಲಿ ಮತ್ತೊಂದು ಜೀವವನ್ನು ಬಲಿ ತೆಗೆದುಕೊಂಡಿದೆ. ದೇಶಾದ್ಯಂತ ಏಕರೂಪದ ಶಾಲಾ ಪಠ್ಯಕ್ರಮವಿಲ್ಲ. ಆದರೂ ವೈದ್ಯಕೀಯ ಪ್ರವೇಶಕ್ಕಾಗಿ ರಾಷ್ಟ್ರವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿರುವುದು ತರ್ಕಬದ್ಧವಲ್ಲ” ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ದುರ್ಗಾ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ ಹೇಳಿದ್ದರು.

“412 ಸರ್ಕಾರಿ ತರಬೇತಿ ಕೇಂದ್ರಗಳ ಮೂಲಕ ಉಚಿತ ನೀಟ್ ಕೋಚಿಂಗ್ ಪಡೆದಿದ್ದ 19,000 ವಿದ್ಯಾರ್ಥಿಗಳಲ್ಲಿ ಯಾರೊಬ್ಬರೂ ಕಳೆದ ವರ್ಷ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಲಿಲ್ಲ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯ ಅಗತ್ಯವಿದೆ. ಆದರೆ ಇದಕ್ಕೆ ಭಾರಿ ವೆಚ್ಚ ಮಾಡಬೇಕಾಗುತ್ತದೆ. ತಮಿಳುನಾಡಿನಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವವರೆಗೆ ನೀಟ್ ಅನ್ನು ರದ್ದುಗೊಳಿಸಬೇಕು” ಎಂದು ಅವರು ಹೇಳಿದ್ದರು.

ಈ ಅನ್ಯಾಯದ ಸಾವುಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಮಧುರೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದಿ ಹಿಂದು ವರದಿ ಮಾಡಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...