Homeಮುಖಪುಟಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

- Advertisement -
- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’(Centre Government) ಎಂದು ಕರೆಯುವುದನ್ನು ನಿಲ್ಲಿಸಿದ್ದು, ಬದಲಾಗಿ ‘ಒಕ್ಕೂಟ ಸರ್ಕಾರ’(Union Government) ಎಂದು ಉಲ್ಲೇಖಿಸುತ್ತಿದೆ. ಕೆಲವು ಬಿಜೆಪಿ ಬೆಂಬಲಿಗರು ಇದನ್ನು ಎನ್‌ಡಿಎ ನೇತೃತ್ವದ ಸರ್ಕಾರದ ವಿರುದ್ಧದ ರಾಜಕೀಯ ನಡೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ, ತಾನು ಸಂವಿಧಾನದಲ್ಲಿ ಬರೆಯಲ್ಪಟ್ಟದ್ದನ್ನು ಮಾತ್ರ ಅನುಸರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದೆ.

ಜನಪ್ರಿಯ ನಂಬಿಕೆಗೆ ವಿರುದ್ಧವಾದ ನಡೆಯನ್ನು ಸಂವಿಧಾನ ತಜ್ಞ ಸುಭಾಷ್ ಕಶ್ಯಪ್ ಸಮರ್ಥಿಸಿದ್ದಾರೆ. ‘ಕೇಂದ್ರ’ ಎಂಬ ಪದವು ಸಂವಿಧಾನದಲ್ಲಿಲ್ಲ ಮತ್ತು ಅದನ್ನು ಬಳಸುವುದು ನಿಖರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

‘ಕೇಂದ್ರ’ ಎಂಬ ಪದವು ವೃತ್ತದ ಮಧ್ಯದಲ್ಲಿರುವ ಒಂದು ಬಿಂದುವಿಗೆ ಹೇಳಲಾಗುತ್ತದೆ. ಸರ್ಕಾರವನ್ನು ಉಲ್ಲೇಖಿಸಲು ‘ಕೇಂದ್ರ’ ಎಂಬ ಪದವನ್ನು ಬಳಸುವುದರಿಂದ ಸರ್ಕಾರವು ಕೇಂದ್ರ ಬಿಂದುವಾಗಿದೆ ಮತ್ತು ರಾಜ್ಯಗಳು ಅದರ ಪರಿಧಿಯಲ್ಲಿವೆ ಎಂದು ಸೂಚಿಸುತ್ತದೆ. ಮತ್ತೊಂದೆಡೆ, ‘ಒಕ್ಕೂಟ’ ಎಂಬ ಪದವು ‘ಇಡೀ ವಲಯ’ವನ್ನು ಉಲ್ಲೇಖಿಸುತ್ತದೆ. ‘ಒಕ್ಕೂಟ ಸರ್ಕಾರ’ ಎಂಬ ಪದವನ್ನು ಬಳಸುವುದರಿಂದ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯಗಳನ್ನೂ ಉಲ್ಲೇಖಿಸಿದಂತಾಗುತ್ತದೆ.

‘ಕೇಂದ್ರ’ ಎಂಬ ಪದವು ಭಾರತೀಯ ಸಂವಿಧಾನದಲ್ಲಿಲ್ಲ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಸಂವಿಧಾನದ ಕರ್ತೃರು ಅದನ್ನು ಉದ್ದೇಶಪೂರ್ವಕವಾಗಿ ತ್ಯಜಿಸಿ ‘ಯೂನಿಯನ್’ ಪದವನ್ನು ಬಳಸಿದ್ದಾರೆ.

‘ಕೇಂದ್ರ’ ಎಂಬ ಪದವು ವಸಾಹತುಶಾಹಿ ಕಾಲದಿಂದ ಉಳಿದಿದೆ ಬಂದಿದೆ ಎಂದು ಕಶ್ಯಪ್ ಹೇಳಿದ್ದಾರೆ. ನವದೆಹಲಿಯ ಸೆಕ್ರೆಟರಿಯಟ್ ಕಟ್ಟಡದಲ್ಲಿ ಕೆಲಸ ಮಾಡುವ ಅಧಿಕಾರಿ ವರ್ಗದವರು ‘ಕೇಂದ್ರ ಕಾನೂನುಗಳು’ ಮತ್ತು ‘ಕೇಂದ್ರ ಶಾಸಕಾಂಗ’ ಮುಂತಾದ ಪದಗಳನ್ನು ಪಾಲಿಸುತ್ತಾ ಬಳಸುತ್ತಲೇ ಇದ್ದಾರೆ.

ಇದನ್ನೂ ಓದಿ: ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಭಾರತದ ಸಂವಿಧಾನದಲ್ಲಿನ ಅಧ್ಯಾಯವು ನಿರ್ದಿಷ್ಟವಾಗಿ ‘ಒಕ್ಕೂಟ ಸರ್ಕಾರ’, ‘ಒಕ್ಕೂಟ ಮತ್ತು ರಾಜ್ಯ ಸಂಬಂಧಗಳು’ ಮತ್ತು ‘ಒಕ್ಕೂಟ ಶಾಸಕಾಂಗ’ ಎಂಬ ಪದಗಳನ್ನು ಬಳಸುತ್ತದೆ ಎಂದು ಸಂವಿಧಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಭಾರತವು ಫೆಡರಲ್ ಸರ್ಕಾರವಾಗಿದೆ, ಒಕ್ಕೂಟ ಸರ್ಕಾರವನ್ನು ‘ಕೇಂದ್ರ’ ಎಂದು ಕರೆಯುವುದರಲ್ಲಿ ಅರ್ಥವಿಲ್ಲ, ಏಕೆಂದರೆ ಇದು ದೆಹಲಿಯು ಕೇಂದ್ರವಾಗಿದ್ದು, ಉಳಿದೆ ಸರ್ಕಾರಗಳ ಮೇಲೆ ಅಧಿಕಾರವನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುತ್ತದೆ ಎಂದು ಅವರು ಸೂಚಿಸುತ್ತಾರೆ.

ಈ ಪದವು ರಾಜ್ಯಗಳಿಗೆ ಸಮಾನವಾದ ಸ್ಥಾನವಿಲ್ಲ ಎಂದು ಸಹ ಇದು ಸೂಚಿಸುತ್ತದೆ. “ಫೆಡರಲ್ ವ್ಯವಸ್ಥೆಯಲ್ಲಿ, ಅಧಿಕಾರವನ್ನು ಇಡೀ ದೇಶದ ನಡುವೆ ವಿಂಗಡಿಸಲಾಗಿದೆ. ರಾಜ್ಯಗಳು ಅಧೀನವಾಗಿಲ್ಲ, ಬದಲಾಗಿ ಸಮಾನವಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...