Homeಮುಖಪುಟಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

- Advertisement -
- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’(Centre Government) ಎಂದು ಕರೆಯುವುದನ್ನು ನಿಲ್ಲಿಸಿದ್ದು, ಬದಲಾಗಿ ‘ಒಕ್ಕೂಟ ಸರ್ಕಾರ’(Union Government) ಎಂದು ಉಲ್ಲೇಖಿಸುತ್ತಿದೆ. ಕೆಲವು ಬಿಜೆಪಿ ಬೆಂಬಲಿಗರು ಇದನ್ನು ಎನ್‌ಡಿಎ ನೇತೃತ್ವದ ಸರ್ಕಾರದ ವಿರುದ್ಧದ ರಾಜಕೀಯ ನಡೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ, ತಾನು ಸಂವಿಧಾನದಲ್ಲಿ ಬರೆಯಲ್ಪಟ್ಟದ್ದನ್ನು ಮಾತ್ರ ಅನುಸರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದೆ.

ಜನಪ್ರಿಯ ನಂಬಿಕೆಗೆ ವಿರುದ್ಧವಾದ ನಡೆಯನ್ನು ಸಂವಿಧಾನ ತಜ್ಞ ಸುಭಾಷ್ ಕಶ್ಯಪ್ ಸಮರ್ಥಿಸಿದ್ದಾರೆ. ‘ಕೇಂದ್ರ’ ಎಂಬ ಪದವು ಸಂವಿಧಾನದಲ್ಲಿಲ್ಲ ಮತ್ತು ಅದನ್ನು ಬಳಸುವುದು ನಿಖರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

‘ಕೇಂದ್ರ’ ಎಂಬ ಪದವು ವೃತ್ತದ ಮಧ್ಯದಲ್ಲಿರುವ ಒಂದು ಬಿಂದುವಿಗೆ ಹೇಳಲಾಗುತ್ತದೆ. ಸರ್ಕಾರವನ್ನು ಉಲ್ಲೇಖಿಸಲು ‘ಕೇಂದ್ರ’ ಎಂಬ ಪದವನ್ನು ಬಳಸುವುದರಿಂದ ಸರ್ಕಾರವು ಕೇಂದ್ರ ಬಿಂದುವಾಗಿದೆ ಮತ್ತು ರಾಜ್ಯಗಳು ಅದರ ಪರಿಧಿಯಲ್ಲಿವೆ ಎಂದು ಸೂಚಿಸುತ್ತದೆ. ಮತ್ತೊಂದೆಡೆ, ‘ಒಕ್ಕೂಟ’ ಎಂಬ ಪದವು ‘ಇಡೀ ವಲಯ’ವನ್ನು ಉಲ್ಲೇಖಿಸುತ್ತದೆ. ‘ಒಕ್ಕೂಟ ಸರ್ಕಾರ’ ಎಂಬ ಪದವನ್ನು ಬಳಸುವುದರಿಂದ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯಗಳನ್ನೂ ಉಲ್ಲೇಖಿಸಿದಂತಾಗುತ್ತದೆ.

‘ಕೇಂದ್ರ’ ಎಂಬ ಪದವು ಭಾರತೀಯ ಸಂವಿಧಾನದಲ್ಲಿಲ್ಲ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಸಂವಿಧಾನದ ಕರ್ತೃರು ಅದನ್ನು ಉದ್ದೇಶಪೂರ್ವಕವಾಗಿ ತ್ಯಜಿಸಿ ‘ಯೂನಿಯನ್’ ಪದವನ್ನು ಬಳಸಿದ್ದಾರೆ.

‘ಕೇಂದ್ರ’ ಎಂಬ ಪದವು ವಸಾಹತುಶಾಹಿ ಕಾಲದಿಂದ ಉಳಿದಿದೆ ಬಂದಿದೆ ಎಂದು ಕಶ್ಯಪ್ ಹೇಳಿದ್ದಾರೆ. ನವದೆಹಲಿಯ ಸೆಕ್ರೆಟರಿಯಟ್ ಕಟ್ಟಡದಲ್ಲಿ ಕೆಲಸ ಮಾಡುವ ಅಧಿಕಾರಿ ವರ್ಗದವರು ‘ಕೇಂದ್ರ ಕಾನೂನುಗಳು’ ಮತ್ತು ‘ಕೇಂದ್ರ ಶಾಸಕಾಂಗ’ ಮುಂತಾದ ಪದಗಳನ್ನು ಪಾಲಿಸುತ್ತಾ ಬಳಸುತ್ತಲೇ ಇದ್ದಾರೆ.

ಇದನ್ನೂ ಓದಿ: ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಭಾರತದ ಸಂವಿಧಾನದಲ್ಲಿನ ಅಧ್ಯಾಯವು ನಿರ್ದಿಷ್ಟವಾಗಿ ‘ಒಕ್ಕೂಟ ಸರ್ಕಾರ’, ‘ಒಕ್ಕೂಟ ಮತ್ತು ರಾಜ್ಯ ಸಂಬಂಧಗಳು’ ಮತ್ತು ‘ಒಕ್ಕೂಟ ಶಾಸಕಾಂಗ’ ಎಂಬ ಪದಗಳನ್ನು ಬಳಸುತ್ತದೆ ಎಂದು ಸಂವಿಧಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಭಾರತವು ಫೆಡರಲ್ ಸರ್ಕಾರವಾಗಿದೆ, ಒಕ್ಕೂಟ ಸರ್ಕಾರವನ್ನು ‘ಕೇಂದ್ರ’ ಎಂದು ಕರೆಯುವುದರಲ್ಲಿ ಅರ್ಥವಿಲ್ಲ, ಏಕೆಂದರೆ ಇದು ದೆಹಲಿಯು ಕೇಂದ್ರವಾಗಿದ್ದು, ಉಳಿದೆ ಸರ್ಕಾರಗಳ ಮೇಲೆ ಅಧಿಕಾರವನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುತ್ತದೆ ಎಂದು ಅವರು ಸೂಚಿಸುತ್ತಾರೆ.

ಈ ಪದವು ರಾಜ್ಯಗಳಿಗೆ ಸಮಾನವಾದ ಸ್ಥಾನವಿಲ್ಲ ಎಂದು ಸಹ ಇದು ಸೂಚಿಸುತ್ತದೆ. “ಫೆಡರಲ್ ವ್ಯವಸ್ಥೆಯಲ್ಲಿ, ಅಧಿಕಾರವನ್ನು ಇಡೀ ದೇಶದ ನಡುವೆ ವಿಂಗಡಿಸಲಾಗಿದೆ. ರಾಜ್ಯಗಳು ಅಧೀನವಾಗಿಲ್ಲ, ಬದಲಾಗಿ ಸಮಾನವಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....