Homeಮುಖಪುಟಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

- Advertisement -
- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’(Centre Government) ಎಂದು ಕರೆಯುವುದನ್ನು ನಿಲ್ಲಿಸಿದ್ದು, ಬದಲಾಗಿ ‘ಒಕ್ಕೂಟ ಸರ್ಕಾರ’(Union Government) ಎಂದು ಉಲ್ಲೇಖಿಸುತ್ತಿದೆ. ಕೆಲವು ಬಿಜೆಪಿ ಬೆಂಬಲಿಗರು ಇದನ್ನು ಎನ್‌ಡಿಎ ನೇತೃತ್ವದ ಸರ್ಕಾರದ ವಿರುದ್ಧದ ರಾಜಕೀಯ ನಡೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ, ತಾನು ಸಂವಿಧಾನದಲ್ಲಿ ಬರೆಯಲ್ಪಟ್ಟದ್ದನ್ನು ಮಾತ್ರ ಅನುಸರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದೆ.

ಜನಪ್ರಿಯ ನಂಬಿಕೆಗೆ ವಿರುದ್ಧವಾದ ನಡೆಯನ್ನು ಸಂವಿಧಾನ ತಜ್ಞ ಸುಭಾಷ್ ಕಶ್ಯಪ್ ಸಮರ್ಥಿಸಿದ್ದಾರೆ. ‘ಕೇಂದ್ರ’ ಎಂಬ ಪದವು ಸಂವಿಧಾನದಲ್ಲಿಲ್ಲ ಮತ್ತು ಅದನ್ನು ಬಳಸುವುದು ನಿಖರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

‘ಕೇಂದ್ರ’ ಎಂಬ ಪದವು ವೃತ್ತದ ಮಧ್ಯದಲ್ಲಿರುವ ಒಂದು ಬಿಂದುವಿಗೆ ಹೇಳಲಾಗುತ್ತದೆ. ಸರ್ಕಾರವನ್ನು ಉಲ್ಲೇಖಿಸಲು ‘ಕೇಂದ್ರ’ ಎಂಬ ಪದವನ್ನು ಬಳಸುವುದರಿಂದ ಸರ್ಕಾರವು ಕೇಂದ್ರ ಬಿಂದುವಾಗಿದೆ ಮತ್ತು ರಾಜ್ಯಗಳು ಅದರ ಪರಿಧಿಯಲ್ಲಿವೆ ಎಂದು ಸೂಚಿಸುತ್ತದೆ. ಮತ್ತೊಂದೆಡೆ, ‘ಒಕ್ಕೂಟ’ ಎಂಬ ಪದವು ‘ಇಡೀ ವಲಯ’ವನ್ನು ಉಲ್ಲೇಖಿಸುತ್ತದೆ. ‘ಒಕ್ಕೂಟ ಸರ್ಕಾರ’ ಎಂಬ ಪದವನ್ನು ಬಳಸುವುದರಿಂದ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯಗಳನ್ನೂ ಉಲ್ಲೇಖಿಸಿದಂತಾಗುತ್ತದೆ.

‘ಕೇಂದ್ರ’ ಎಂಬ ಪದವು ಭಾರತೀಯ ಸಂವಿಧಾನದಲ್ಲಿಲ್ಲ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಸಂವಿಧಾನದ ಕರ್ತೃರು ಅದನ್ನು ಉದ್ದೇಶಪೂರ್ವಕವಾಗಿ ತ್ಯಜಿಸಿ ‘ಯೂನಿಯನ್’ ಪದವನ್ನು ಬಳಸಿದ್ದಾರೆ.

‘ಕೇಂದ್ರ’ ಎಂಬ ಪದವು ವಸಾಹತುಶಾಹಿ ಕಾಲದಿಂದ ಉಳಿದಿದೆ ಬಂದಿದೆ ಎಂದು ಕಶ್ಯಪ್ ಹೇಳಿದ್ದಾರೆ. ನವದೆಹಲಿಯ ಸೆಕ್ರೆಟರಿಯಟ್ ಕಟ್ಟಡದಲ್ಲಿ ಕೆಲಸ ಮಾಡುವ ಅಧಿಕಾರಿ ವರ್ಗದವರು ‘ಕೇಂದ್ರ ಕಾನೂನುಗಳು’ ಮತ್ತು ‘ಕೇಂದ್ರ ಶಾಸಕಾಂಗ’ ಮುಂತಾದ ಪದಗಳನ್ನು ಪಾಲಿಸುತ್ತಾ ಬಳಸುತ್ತಲೇ ಇದ್ದಾರೆ.

ಇದನ್ನೂ ಓದಿ: ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಭಾರತದ ಸಂವಿಧಾನದಲ್ಲಿನ ಅಧ್ಯಾಯವು ನಿರ್ದಿಷ್ಟವಾಗಿ ‘ಒಕ್ಕೂಟ ಸರ್ಕಾರ’, ‘ಒಕ್ಕೂಟ ಮತ್ತು ರಾಜ್ಯ ಸಂಬಂಧಗಳು’ ಮತ್ತು ‘ಒಕ್ಕೂಟ ಶಾಸಕಾಂಗ’ ಎಂಬ ಪದಗಳನ್ನು ಬಳಸುತ್ತದೆ ಎಂದು ಸಂವಿಧಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಭಾರತವು ಫೆಡರಲ್ ಸರ್ಕಾರವಾಗಿದೆ, ಒಕ್ಕೂಟ ಸರ್ಕಾರವನ್ನು ‘ಕೇಂದ್ರ’ ಎಂದು ಕರೆಯುವುದರಲ್ಲಿ ಅರ್ಥವಿಲ್ಲ, ಏಕೆಂದರೆ ಇದು ದೆಹಲಿಯು ಕೇಂದ್ರವಾಗಿದ್ದು, ಉಳಿದೆ ಸರ್ಕಾರಗಳ ಮೇಲೆ ಅಧಿಕಾರವನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುತ್ತದೆ ಎಂದು ಅವರು ಸೂಚಿಸುತ್ತಾರೆ.

ಈ ಪದವು ರಾಜ್ಯಗಳಿಗೆ ಸಮಾನವಾದ ಸ್ಥಾನವಿಲ್ಲ ಎಂದು ಸಹ ಇದು ಸೂಚಿಸುತ್ತದೆ. “ಫೆಡರಲ್ ವ್ಯವಸ್ಥೆಯಲ್ಲಿ, ಅಧಿಕಾರವನ್ನು ಇಡೀ ದೇಶದ ನಡುವೆ ವಿಂಗಡಿಸಲಾಗಿದೆ. ರಾಜ್ಯಗಳು ಅಧೀನವಾಗಿಲ್ಲ, ಬದಲಾಗಿ ಸಮಾನವಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...