Homeಮುಖಪುಟಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

- Advertisement -
- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’(Centre Government) ಎಂದು ಕರೆಯುವುದನ್ನು ನಿಲ್ಲಿಸಿದ್ದು, ಬದಲಾಗಿ ‘ಒಕ್ಕೂಟ ಸರ್ಕಾರ’(Union Government) ಎಂದು ಉಲ್ಲೇಖಿಸುತ್ತಿದೆ. ಕೆಲವು ಬಿಜೆಪಿ ಬೆಂಬಲಿಗರು ಇದನ್ನು ಎನ್‌ಡಿಎ ನೇತೃತ್ವದ ಸರ್ಕಾರದ ವಿರುದ್ಧದ ರಾಜಕೀಯ ನಡೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ, ತಾನು ಸಂವಿಧಾನದಲ್ಲಿ ಬರೆಯಲ್ಪಟ್ಟದ್ದನ್ನು ಮಾತ್ರ ಅನುಸರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದೆ.

ಜನಪ್ರಿಯ ನಂಬಿಕೆಗೆ ವಿರುದ್ಧವಾದ ನಡೆಯನ್ನು ಸಂವಿಧಾನ ತಜ್ಞ ಸುಭಾಷ್ ಕಶ್ಯಪ್ ಸಮರ್ಥಿಸಿದ್ದಾರೆ. ‘ಕೇಂದ್ರ’ ಎಂಬ ಪದವು ಸಂವಿಧಾನದಲ್ಲಿಲ್ಲ ಮತ್ತು ಅದನ್ನು ಬಳಸುವುದು ನಿಖರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

‘ಕೇಂದ್ರ’ ಎಂಬ ಪದವು ವೃತ್ತದ ಮಧ್ಯದಲ್ಲಿರುವ ಒಂದು ಬಿಂದುವಿಗೆ ಹೇಳಲಾಗುತ್ತದೆ. ಸರ್ಕಾರವನ್ನು ಉಲ್ಲೇಖಿಸಲು ‘ಕೇಂದ್ರ’ ಎಂಬ ಪದವನ್ನು ಬಳಸುವುದರಿಂದ ಸರ್ಕಾರವು ಕೇಂದ್ರ ಬಿಂದುವಾಗಿದೆ ಮತ್ತು ರಾಜ್ಯಗಳು ಅದರ ಪರಿಧಿಯಲ್ಲಿವೆ ಎಂದು ಸೂಚಿಸುತ್ತದೆ. ಮತ್ತೊಂದೆಡೆ, ‘ಒಕ್ಕೂಟ’ ಎಂಬ ಪದವು ‘ಇಡೀ ವಲಯ’ವನ್ನು ಉಲ್ಲೇಖಿಸುತ್ತದೆ. ‘ಒಕ್ಕೂಟ ಸರ್ಕಾರ’ ಎಂಬ ಪದವನ್ನು ಬಳಸುವುದರಿಂದ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯಗಳನ್ನೂ ಉಲ್ಲೇಖಿಸಿದಂತಾಗುತ್ತದೆ.

‘ಕೇಂದ್ರ’ ಎಂಬ ಪದವು ಭಾರತೀಯ ಸಂವಿಧಾನದಲ್ಲಿಲ್ಲ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಸಂವಿಧಾನದ ಕರ್ತೃರು ಅದನ್ನು ಉದ್ದೇಶಪೂರ್ವಕವಾಗಿ ತ್ಯಜಿಸಿ ‘ಯೂನಿಯನ್’ ಪದವನ್ನು ಬಳಸಿದ್ದಾರೆ.

‘ಕೇಂದ್ರ’ ಎಂಬ ಪದವು ವಸಾಹತುಶಾಹಿ ಕಾಲದಿಂದ ಉಳಿದಿದೆ ಬಂದಿದೆ ಎಂದು ಕಶ್ಯಪ್ ಹೇಳಿದ್ದಾರೆ. ನವದೆಹಲಿಯ ಸೆಕ್ರೆಟರಿಯಟ್ ಕಟ್ಟಡದಲ್ಲಿ ಕೆಲಸ ಮಾಡುವ ಅಧಿಕಾರಿ ವರ್ಗದವರು ‘ಕೇಂದ್ರ ಕಾನೂನುಗಳು’ ಮತ್ತು ‘ಕೇಂದ್ರ ಶಾಸಕಾಂಗ’ ಮುಂತಾದ ಪದಗಳನ್ನು ಪಾಲಿಸುತ್ತಾ ಬಳಸುತ್ತಲೇ ಇದ್ದಾರೆ.

ಇದನ್ನೂ ಓದಿ: ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಭಾರತದ ಸಂವಿಧಾನದಲ್ಲಿನ ಅಧ್ಯಾಯವು ನಿರ್ದಿಷ್ಟವಾಗಿ ‘ಒಕ್ಕೂಟ ಸರ್ಕಾರ’, ‘ಒಕ್ಕೂಟ ಮತ್ತು ರಾಜ್ಯ ಸಂಬಂಧಗಳು’ ಮತ್ತು ‘ಒಕ್ಕೂಟ ಶಾಸಕಾಂಗ’ ಎಂಬ ಪದಗಳನ್ನು ಬಳಸುತ್ತದೆ ಎಂದು ಸಂವಿಧಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಭಾರತವು ಫೆಡರಲ್ ಸರ್ಕಾರವಾಗಿದೆ, ಒಕ್ಕೂಟ ಸರ್ಕಾರವನ್ನು ‘ಕೇಂದ್ರ’ ಎಂದು ಕರೆಯುವುದರಲ್ಲಿ ಅರ್ಥವಿಲ್ಲ, ಏಕೆಂದರೆ ಇದು ದೆಹಲಿಯು ಕೇಂದ್ರವಾಗಿದ್ದು, ಉಳಿದೆ ಸರ್ಕಾರಗಳ ಮೇಲೆ ಅಧಿಕಾರವನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುತ್ತದೆ ಎಂದು ಅವರು ಸೂಚಿಸುತ್ತಾರೆ.

ಈ ಪದವು ರಾಜ್ಯಗಳಿಗೆ ಸಮಾನವಾದ ಸ್ಥಾನವಿಲ್ಲ ಎಂದು ಸಹ ಇದು ಸೂಚಿಸುತ್ತದೆ. “ಫೆಡರಲ್ ವ್ಯವಸ್ಥೆಯಲ್ಲಿ, ಅಧಿಕಾರವನ್ನು ಇಡೀ ದೇಶದ ನಡುವೆ ವಿಂಗಡಿಸಲಾಗಿದೆ. ರಾಜ್ಯಗಳು ಅಧೀನವಾಗಿಲ್ಲ, ಬದಲಾಗಿ ಸಮಾನವಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...