ತಮಿಳುನಾಡು ಆಡಳಿತರೂಢ ಪಕ್ಷ ಎಐಎಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಚೆನ್ನೈನಲ್ಲಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷವು ನೀಡಿದ ಭರವಸೆಗಳಲ್ಲಿ ಅಮ್ಮಾ ವಾಶಿಂಗ್ ಮೆಷಿನ್, ಮಹಿಳೆಯರಿಗೆ ಪ್ರಯಾಣ ರಿಯಾಯಿತಿ, ಅಮ್ಮ ಬ್ಯಾಂಕಿಂಗ್ ಕಾರ್ಡ್ ಯೋಜನೆಯ ಅನುಷ್ಠಾನ ಮತ್ತು ಶ್ರೀಲಂಕಾದ ತಮಿಳರಿಗೆ ಉಭಯ ಪೌರತ್ವ, ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಕ್ಷ ಹೇಳಿದೆ.
ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮಾತನಾಡಿ, ಅಮ್ಮ ವಸತಿ ಯೋಜನೆ ಅನುಷ್ಠಾನಗೊಳಿಸುವುದು, ಮಾತೃತ್ವ ರಜೆಯನ್ನು 12 ತಿಂಗಳವರೆಗೆ ವಿಸ್ತರಿಸುವುದು, ಇಡೀ ವರ್ಷ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕೇಬಲ್ ಸಂಪರ್ಕ ಮತ್ತು ಉಚಿತ 2 ಜಿ ಡೇಟಾವನ್ನು ನೀಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಲಾಕ್ಡೌನ್ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ
ಪಕ್ಷದ ಪ್ರಣಾಳಿಕೆಯ ಬಗ್ಗೆ ಮಾತನಾಡಿದ ಪಕ್ಷದ ಮುಖಂಡ ಸಿ. ಪೊನ್ನಯ್ಯನ್, “ಕುಟುಂಬವೊಂದಕ್ಕೆ ಪ್ರತಿ ವರ್ಷ ಆರು ಉಚಿತ ಎಲ್ಪಿಜಿ ಸಿಲಿಂಡರ್. ಒಂದು ಕುಟುಂಬದಿಂದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಕೆಲಸ ನೀಡಲಾಗುವುದು” ಎಂದು ಹೇಳಿದ್ದಾರೆ.
"We will request Central govt for dual citizenship & residential permit to Sri Lankan Tamil refugees in India. AIADMK will continue to ask the Central government to withdraw CAA," AIADMK leader C Ponnaiyan reads the party manifesto in Chennai.
— ANI (@ANI) March 14, 2021
“ನಾವು ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ಉಭಯ ಪೌರತ್ವ ಮತ್ತು ವಸತಿ ಪರವಾನಗಿಗಾಗಿ ಕೇಂದ್ರ ಸರ್ಕಾರವನ್ನು ಕೋರುತ್ತೇವೆ. ಸಿಎಎಯನ್ನು ಹಿಂಪಡೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಲೇ ಇರುತ್ತೇವೆ” ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು