Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...