Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...