Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...