Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...