Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...