Homeಮುಖಪುಟತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ದೀದಿ ವರ್ಸಸ್ ಬಿಜೆಪಿ ಎಂಬ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದರೆ, ತಮಿಳುನಾಡು ರಾಜಕೀಯ ನಾಯಕರ ಜೊತೆಗೆ ಚಿತ್ರನಟ, ನಟಿಯರಿಂದಾಗಿ ಗಮನ ಸೆಳೆಯುತ್ತಿದೆ. ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದಾರೆ.

ಎಐಎಡಿಎಂಕೆ ಮೈತ್ರಿಕೂಟದಲ್ಲಿ ಕೊಯಮತ್ತೂರಿನ ದಕ್ಷಿಣ ಕ್ಷೇತ್ರವನ್ನು ಬಿಜೆಪಿಗೆ ನೀಡಲಾಗಿದೆ. ವನತಿ ಶ್ರೀನಿವಾಸನ್ ಬಿಜೆಪಿ ಪರವಾಗಿ ಇಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತೆಯೇ ಡಿಎಂಕೆ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಮಕ್ಕಳ್ ನೀಧಿ ಮಯ್ಯಂ ಪಕ್ಷವನ್ನು ಪ್ರಾರಂಭಿಸಿದ ನಂತರ ಪಕ್ಷವು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. ಯಾವುದೇ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಶೇ.4 ಮತಗಳಿಸಿ ಗಮನಸೆಳೆದಿತ್ತು. ಆದರೆ ಆ ಚುನಾವಣೆಯಲ್ಲಿ ಕಮಲ್ ಹಾಸನ್ ಸ್ಪರ್ಧಿಸಿರಲಿಲ್ಲ, ಹಾಗಾಗಿ ಇದು ಕಮಲ್ ಹಾಸನ್ ಎದುರಿಸಬೇಕಾದ ಮೊದಲ ಚುನಾವಣೆಯಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಶುಕ್ರವಾರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್, ತಾವೂ ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಜನರಿಗಾಗಿ ಕಮಲ್ ಹಾಸನ್ ಎರಡು ರಾಷ್ಟ್ರೀಯ ಪಕ್ಷಗಳೊಂದಿಗೆ ಘರ್ಷಣೆ ನಡೆಸುತ್ತಿರುವುದು ಭಾರಿ ನಿರೀಕ್ಷೆಗೆ ಕಾರಣವಾಗಿದೆ. ಬಿಜೆಪಿಯ ವನತಿ ಶ್ರೀನಿವಾಸನ್ ಎದುರು ಕಮಲ್ ಹಾಸನ್ ಅಲ್ಲಿ ದೊಡ್ಡ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಕಮಲ್ ಹಾಸನ್ ಪಕ್ಷಕ್ಕೆ ಅಲ್ಲಿ ಉತ್ತಮ ವೋಟ್ ಬ್ಯಾಂಕ್ ಇದೆ ಎನ್ನಲಾಗಿದೆ.

ಇತ್ತ ಏಪ್ರಿಲ್ 6 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ತಮ್ಮ ಕೋಲಥೂರ್ ಕ್ಷೇತ್ರದಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

ಶುಕ್ರವಾರ ತಮಿಳುನಾಡು ಚುನಾವಣೆಗೆ ಎಲ್ಲಾ 173 ಅಭ್ಯರ್ಥಿಗಳ ಪಟ್ಟಿಯನ್ನು ಸ್ಟಾಲಿನ್ ಬಿಡುಗಡೆ ಮಾಡಿದರು. ಹಿರಿಯರಾದ ದುರೈ ಮುರುಗನ್, ಕೆ.ಎನ್ ನೆಹರು, ಕೆ.ಪೊನ್ಮುಡಿ ಮತ್ತು ಎಮ್ಆರ್‌ಕೆ ಪನ್ನಿರ್‌ಸೆಲ್ವಂ ಸೇರಿದಂತೆ ಹಲವರು ತಮ್ಮ ಟಿಕೆಟ್‌ಗಳನ್ನು ಗಟ್ಟಿ ಮಾಡಿಕೊಂಡಿದ್ದಾರೆ.

ಮಾರ್ಚ್ 15 ರಂದು ನಾಮಪತ್ರವನ್ನು ಸಲ್ಲಿಸಿ ಅಭಿಯಾನದ ಮುಂದಿನ ಹಂತದಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸ್ಟಾಲಿನ್ ಹೇಳಿದ್ದಾರೆ. 2011 ರಿಂದ ಅಧಿಕಾರದಿಂದ ಹೊರಗಿರುವ ಡಿಎಂಕೆ, ಆಡಳಿತಾರೂ AIADMK ಯನ್ನು ಪದಚ್ಯುತಗೊಳಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯುವತ್ತ ದೃಷ್ಟಿ ಹಾಯಿಸುತ್ತಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...