Homeಮುಖಪುಟತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ದೀದಿ ವರ್ಸಸ್ ಬಿಜೆಪಿ ಎಂಬ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದರೆ, ತಮಿಳುನಾಡು ರಾಜಕೀಯ ನಾಯಕರ ಜೊತೆಗೆ ಚಿತ್ರನಟ, ನಟಿಯರಿಂದಾಗಿ ಗಮನ ಸೆಳೆಯುತ್ತಿದೆ. ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದಾರೆ.

ಎಐಎಡಿಎಂಕೆ ಮೈತ್ರಿಕೂಟದಲ್ಲಿ ಕೊಯಮತ್ತೂರಿನ ದಕ್ಷಿಣ ಕ್ಷೇತ್ರವನ್ನು ಬಿಜೆಪಿಗೆ ನೀಡಲಾಗಿದೆ. ವನತಿ ಶ್ರೀನಿವಾಸನ್ ಬಿಜೆಪಿ ಪರವಾಗಿ ಇಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತೆಯೇ ಡಿಎಂಕೆ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಮಕ್ಕಳ್ ನೀಧಿ ಮಯ್ಯಂ ಪಕ್ಷವನ್ನು ಪ್ರಾರಂಭಿಸಿದ ನಂತರ ಪಕ್ಷವು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. ಯಾವುದೇ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಶೇ.4 ಮತಗಳಿಸಿ ಗಮನಸೆಳೆದಿತ್ತು. ಆದರೆ ಆ ಚುನಾವಣೆಯಲ್ಲಿ ಕಮಲ್ ಹಾಸನ್ ಸ್ಪರ್ಧಿಸಿರಲಿಲ್ಲ, ಹಾಗಾಗಿ ಇದು ಕಮಲ್ ಹಾಸನ್ ಎದುರಿಸಬೇಕಾದ ಮೊದಲ ಚುನಾವಣೆಯಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಶುಕ್ರವಾರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್, ತಾವೂ ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಜನರಿಗಾಗಿ ಕಮಲ್ ಹಾಸನ್ ಎರಡು ರಾಷ್ಟ್ರೀಯ ಪಕ್ಷಗಳೊಂದಿಗೆ ಘರ್ಷಣೆ ನಡೆಸುತ್ತಿರುವುದು ಭಾರಿ ನಿರೀಕ್ಷೆಗೆ ಕಾರಣವಾಗಿದೆ. ಬಿಜೆಪಿಯ ವನತಿ ಶ್ರೀನಿವಾಸನ್ ಎದುರು ಕಮಲ್ ಹಾಸನ್ ಅಲ್ಲಿ ದೊಡ್ಡ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಕಮಲ್ ಹಾಸನ್ ಪಕ್ಷಕ್ಕೆ ಅಲ್ಲಿ ಉತ್ತಮ ವೋಟ್ ಬ್ಯಾಂಕ್ ಇದೆ ಎನ್ನಲಾಗಿದೆ.

ಇತ್ತ ಏಪ್ರಿಲ್ 6 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ತಮ್ಮ ಕೋಲಥೂರ್ ಕ್ಷೇತ್ರದಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

ಶುಕ್ರವಾರ ತಮಿಳುನಾಡು ಚುನಾವಣೆಗೆ ಎಲ್ಲಾ 173 ಅಭ್ಯರ್ಥಿಗಳ ಪಟ್ಟಿಯನ್ನು ಸ್ಟಾಲಿನ್ ಬಿಡುಗಡೆ ಮಾಡಿದರು. ಹಿರಿಯರಾದ ದುರೈ ಮುರುಗನ್, ಕೆ.ಎನ್ ನೆಹರು, ಕೆ.ಪೊನ್ಮುಡಿ ಮತ್ತು ಎಮ್ಆರ್‌ಕೆ ಪನ್ನಿರ್‌ಸೆಲ್ವಂ ಸೇರಿದಂತೆ ಹಲವರು ತಮ್ಮ ಟಿಕೆಟ್‌ಗಳನ್ನು ಗಟ್ಟಿ ಮಾಡಿಕೊಂಡಿದ್ದಾರೆ.

ಮಾರ್ಚ್ 15 ರಂದು ನಾಮಪತ್ರವನ್ನು ಸಲ್ಲಿಸಿ ಅಭಿಯಾನದ ಮುಂದಿನ ಹಂತದಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸ್ಟಾಲಿನ್ ಹೇಳಿದ್ದಾರೆ. 2011 ರಿಂದ ಅಧಿಕಾರದಿಂದ ಹೊರಗಿರುವ ಡಿಎಂಕೆ, ಆಡಳಿತಾರೂ AIADMK ಯನ್ನು ಪದಚ್ಯುತಗೊಳಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯುವತ್ತ ದೃಷ್ಟಿ ಹಾಯಿಸುತ್ತಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...