Homeಮುಖಪುಟತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ದೀದಿ ವರ್ಸಸ್ ಬಿಜೆಪಿ ಎಂಬ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದರೆ, ತಮಿಳುನಾಡು ರಾಜಕೀಯ ನಾಯಕರ ಜೊತೆಗೆ ಚಿತ್ರನಟ, ನಟಿಯರಿಂದಾಗಿ ಗಮನ ಸೆಳೆಯುತ್ತಿದೆ. ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದಾರೆ.

ಎಐಎಡಿಎಂಕೆ ಮೈತ್ರಿಕೂಟದಲ್ಲಿ ಕೊಯಮತ್ತೂರಿನ ದಕ್ಷಿಣ ಕ್ಷೇತ್ರವನ್ನು ಬಿಜೆಪಿಗೆ ನೀಡಲಾಗಿದೆ. ವನತಿ ಶ್ರೀನಿವಾಸನ್ ಬಿಜೆಪಿ ಪರವಾಗಿ ಇಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತೆಯೇ ಡಿಎಂಕೆ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಮಕ್ಕಳ್ ನೀಧಿ ಮಯ್ಯಂ ಪಕ್ಷವನ್ನು ಪ್ರಾರಂಭಿಸಿದ ನಂತರ ಪಕ್ಷವು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. ಯಾವುದೇ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಶೇ.4 ಮತಗಳಿಸಿ ಗಮನಸೆಳೆದಿತ್ತು. ಆದರೆ ಆ ಚುನಾವಣೆಯಲ್ಲಿ ಕಮಲ್ ಹಾಸನ್ ಸ್ಪರ್ಧಿಸಿರಲಿಲ್ಲ, ಹಾಗಾಗಿ ಇದು ಕಮಲ್ ಹಾಸನ್ ಎದುರಿಸಬೇಕಾದ ಮೊದಲ ಚುನಾವಣೆಯಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಶುಕ್ರವಾರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್, ತಾವೂ ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಜನರಿಗಾಗಿ ಕಮಲ್ ಹಾಸನ್ ಎರಡು ರಾಷ್ಟ್ರೀಯ ಪಕ್ಷಗಳೊಂದಿಗೆ ಘರ್ಷಣೆ ನಡೆಸುತ್ತಿರುವುದು ಭಾರಿ ನಿರೀಕ್ಷೆಗೆ ಕಾರಣವಾಗಿದೆ. ಬಿಜೆಪಿಯ ವನತಿ ಶ್ರೀನಿವಾಸನ್ ಎದುರು ಕಮಲ್ ಹಾಸನ್ ಅಲ್ಲಿ ದೊಡ್ಡ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಕಮಲ್ ಹಾಸನ್ ಪಕ್ಷಕ್ಕೆ ಅಲ್ಲಿ ಉತ್ತಮ ವೋಟ್ ಬ್ಯಾಂಕ್ ಇದೆ ಎನ್ನಲಾಗಿದೆ.

ಇತ್ತ ಏಪ್ರಿಲ್ 6 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ತಮ್ಮ ಕೋಲಥೂರ್ ಕ್ಷೇತ್ರದಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

ಶುಕ್ರವಾರ ತಮಿಳುನಾಡು ಚುನಾವಣೆಗೆ ಎಲ್ಲಾ 173 ಅಭ್ಯರ್ಥಿಗಳ ಪಟ್ಟಿಯನ್ನು ಸ್ಟಾಲಿನ್ ಬಿಡುಗಡೆ ಮಾಡಿದರು. ಹಿರಿಯರಾದ ದುರೈ ಮುರುಗನ್, ಕೆ.ಎನ್ ನೆಹರು, ಕೆ.ಪೊನ್ಮುಡಿ ಮತ್ತು ಎಮ್ಆರ್‌ಕೆ ಪನ್ನಿರ್‌ಸೆಲ್ವಂ ಸೇರಿದಂತೆ ಹಲವರು ತಮ್ಮ ಟಿಕೆಟ್‌ಗಳನ್ನು ಗಟ್ಟಿ ಮಾಡಿಕೊಂಡಿದ್ದಾರೆ.

ಮಾರ್ಚ್ 15 ರಂದು ನಾಮಪತ್ರವನ್ನು ಸಲ್ಲಿಸಿ ಅಭಿಯಾನದ ಮುಂದಿನ ಹಂತದಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸ್ಟಾಲಿನ್ ಹೇಳಿದ್ದಾರೆ. 2011 ರಿಂದ ಅಧಿಕಾರದಿಂದ ಹೊರಗಿರುವ ಡಿಎಂಕೆ, ಆಡಳಿತಾರೂ AIADMK ಯನ್ನು ಪದಚ್ಯುತಗೊಳಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯುವತ್ತ ದೃಷ್ಟಿ ಹಾಯಿಸುತ್ತಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...