Homeಮುಖಪುಟತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ದೀದಿ ವರ್ಸಸ್ ಬಿಜೆಪಿ ಎಂಬ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದರೆ, ತಮಿಳುನಾಡು ರಾಜಕೀಯ ನಾಯಕರ ಜೊತೆಗೆ ಚಿತ್ರನಟ, ನಟಿಯರಿಂದಾಗಿ ಗಮನ ಸೆಳೆಯುತ್ತಿದೆ. ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದಾರೆ.

ಎಐಎಡಿಎಂಕೆ ಮೈತ್ರಿಕೂಟದಲ್ಲಿ ಕೊಯಮತ್ತೂರಿನ ದಕ್ಷಿಣ ಕ್ಷೇತ್ರವನ್ನು ಬಿಜೆಪಿಗೆ ನೀಡಲಾಗಿದೆ. ವನತಿ ಶ್ರೀನಿವಾಸನ್ ಬಿಜೆಪಿ ಪರವಾಗಿ ಇಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತೆಯೇ ಡಿಎಂಕೆ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಮಕ್ಕಳ್ ನೀಧಿ ಮಯ್ಯಂ ಪಕ್ಷವನ್ನು ಪ್ರಾರಂಭಿಸಿದ ನಂತರ ಪಕ್ಷವು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. ಯಾವುದೇ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಶೇ.4 ಮತಗಳಿಸಿ ಗಮನಸೆಳೆದಿತ್ತು. ಆದರೆ ಆ ಚುನಾವಣೆಯಲ್ಲಿ ಕಮಲ್ ಹಾಸನ್ ಸ್ಪರ್ಧಿಸಿರಲಿಲ್ಲ, ಹಾಗಾಗಿ ಇದು ಕಮಲ್ ಹಾಸನ್ ಎದುರಿಸಬೇಕಾದ ಮೊದಲ ಚುನಾವಣೆಯಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಶುಕ್ರವಾರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್, ತಾವೂ ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಜನರಿಗಾಗಿ ಕಮಲ್ ಹಾಸನ್ ಎರಡು ರಾಷ್ಟ್ರೀಯ ಪಕ್ಷಗಳೊಂದಿಗೆ ಘರ್ಷಣೆ ನಡೆಸುತ್ತಿರುವುದು ಭಾರಿ ನಿರೀಕ್ಷೆಗೆ ಕಾರಣವಾಗಿದೆ. ಬಿಜೆಪಿಯ ವನತಿ ಶ್ರೀನಿವಾಸನ್ ಎದುರು ಕಮಲ್ ಹಾಸನ್ ಅಲ್ಲಿ ದೊಡ್ಡ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಕಮಲ್ ಹಾಸನ್ ಪಕ್ಷಕ್ಕೆ ಅಲ್ಲಿ ಉತ್ತಮ ವೋಟ್ ಬ್ಯಾಂಕ್ ಇದೆ ಎನ್ನಲಾಗಿದೆ.

ಇತ್ತ ಏಪ್ರಿಲ್ 6 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ತಮ್ಮ ಕೋಲಥೂರ್ ಕ್ಷೇತ್ರದಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

ಶುಕ್ರವಾರ ತಮಿಳುನಾಡು ಚುನಾವಣೆಗೆ ಎಲ್ಲಾ 173 ಅಭ್ಯರ್ಥಿಗಳ ಪಟ್ಟಿಯನ್ನು ಸ್ಟಾಲಿನ್ ಬಿಡುಗಡೆ ಮಾಡಿದರು. ಹಿರಿಯರಾದ ದುರೈ ಮುರುಗನ್, ಕೆ.ಎನ್ ನೆಹರು, ಕೆ.ಪೊನ್ಮುಡಿ ಮತ್ತು ಎಮ್ಆರ್‌ಕೆ ಪನ್ನಿರ್‌ಸೆಲ್ವಂ ಸೇರಿದಂತೆ ಹಲವರು ತಮ್ಮ ಟಿಕೆಟ್‌ಗಳನ್ನು ಗಟ್ಟಿ ಮಾಡಿಕೊಂಡಿದ್ದಾರೆ.

ಮಾರ್ಚ್ 15 ರಂದು ನಾಮಪತ್ರವನ್ನು ಸಲ್ಲಿಸಿ ಅಭಿಯಾನದ ಮುಂದಿನ ಹಂತದಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸ್ಟಾಲಿನ್ ಹೇಳಿದ್ದಾರೆ. 2011 ರಿಂದ ಅಧಿಕಾರದಿಂದ ಹೊರಗಿರುವ ಡಿಎಂಕೆ, ಆಡಳಿತಾರೂ AIADMK ಯನ್ನು ಪದಚ್ಯುತಗೊಳಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯುವತ್ತ ದೃಷ್ಟಿ ಹಾಯಿಸುತ್ತಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...