Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರಕಾರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರಕಾರ

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿ ಮತ್ತು 2026ರಲ್ಲಿ ನಡೆಯಲಿರುವ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯ ಕುರಿತು ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಿದ್ದಾರೆ.

ತಮಿಳುನಾಡು ಅಸೆಂಬ್ಲಿಯಲ್ಲಿ ಎರಡು ನಿರ್ಣಯಗಳನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಂಡಿಸಿದ್ದಾರೆ. ಸ್ಟಾಲಿನ್ ತಮ್ಮ ಭಾಷಣದಲ್ಲಿ ಒಂದು ದೇಶ ಒಂದು ಚುನಾವಣೆ ನೀತಿಯನ್ನು ಜಾರಿಗೊಳಿಸದಂತೆ ಈ ಸದನವು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ. ಈ ನೀತಿಯು ಪ್ರಜಾಪ್ರಭುತ್ವದ ವಿರುದ್ಧವಾಗಿದೆ, ಇದರ ಜಾರಿ ಸಾಧ್ಯವಿಲ್ಲ, ಸಂವಿಧಾನದಲ್ಲಿಯೂ ಈ ಬಗ್ಗೆ ಅಡಕವಾಗಿಲ್ಲ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ನೀತಿ ಅಪ್ರಾಯೋಗಿಕ. ವೈವಿಧ್ಯಮಯ ದೇಶದಲ್ಲಿ ಏಕಕಾಲದಲ್ಲಿ ಸ್ಥಳೀಯ ಸಂಸ್ಥೆಗಳು, ರಾಜ್ಯ ವಿಧಾನಸಭೆಗಳು ಮತ್ತು ಸಂಸತ್ತಿಗೆ ಚುನಾವಣೆಗಳನ್ನು ನಡೆಸುವುದು ಪ್ರಜಾಪ್ರಭುತ್ವದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸ್ಟಾಲಿನ್, ತಮ್ಮ ಭಾಷಣದ ಸಂದರ್ಭದಲ್ಲಿ, ಈ ಪ್ರಸ್ತಾಪಗಳನ್ನು ಮೊಗ್ಗಿನಲ್ಲೇ ಚಿವುಟಿ ಹಾಕಬೇಕು. ಕ್ಷೇತ್ರಗಳ ಮರುವಿಂಗಡಣೆ ತಮಿಳುನಾಡಿನಂತಹ ದಕ್ಷಿಣ ರಾಜ್ಯಗಳಿಂದ ಸಂಸತ್ತಿನ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮಾಡಿರುವ ಒಂದು ಪಿತೂರಿಯಾಗಿರಬಹುದು ಎಂದು ಸ್ಟಾಲಿನ್ ಹೇಳಿದ್ದಾರೆ.

ಭಾರತವು ಒಕ್ಕೂಟ ರಚನೆಯೊಂದಿಗೆ ಹಲವಾರು ರಾಜ್ಯಗಳನ್ನು ಹೊಂದಿರುವ ದೇಶವಾಗಿದೆ. ಯಾವುದೇ ರಾಜ್ಯವು ಇತರಕ್ಕಿಂತ ದೊಡ್ಡದು ಅಥವಾ ಮುಖ್ಯವಲ್ಲ. ಪ್ರತಿಯೊಂದು ರಾಜ್ಯವನ್ನು ಸಮಾನವಾಗಿ ಪರಿಗಣಿಸಬೇಕು. ಕೇವಲ ಜನಸಂಖ್ಯೆಯನ್ನು ಆಧರಿಸಿದ ರಾಜಕೀಯ ಪ್ರಾತಿನಿಧ್ಯವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ. ಇಂತಹ ಕ್ರಮವು ದೇಶದಲ್ಲಿ ಮತ್ತಷ್ಟು ಪ್ರತಿರೋಧಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯು ಅಪ್ರಾಯೋಗಿಕ ಮತ್ತು ಮುಕ್ತ, ನ್ಯಾಯೋಚಿತ ಮತ್ತು ಸ್ವತಂತ್ರ ಚುನಾವಣೆಗಳಿಗೆ ಒತ್ತು ನೀಡುವ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಏಕಕಾಲಿಕ ಚುನಾವಣೆಗಳು ರಾಜ್ಯ ವಿಧಾನಸಭೆಗಳ ವಿಸರ್ಜನೆಗೆ ಕಾರಣವಾಗಬಹುದು. ಇಂತಹ ನಡೆ ಸಂವಿಧಾನ ವಿರೋಧಿಯಾಗಿರುವುದರಿಂದ ಇದನ್ನು ನಾವು ವಿರೋಧಿಸಬೇಕಾಗಿದೆ. ಕೇಂದ್ರದಲ್ಲಿ ಒಂದು ಸರ್ಕಾರ ಪತನವಾದರೆ, ಅವರು ಎಲ್ಲಾ ರಾಜ್ಯ ಸರ್ಕಾರಗಳನ್ನು ವಿಸರ್ಜಿಸುತ್ತಾರೆಯೇ? ಸರ್ಕಾರಗಳ ಪತನದಿಂದಾಗಿ ಕೆಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆದರೆ ಕೇಂದ್ರದಲ್ಲಿ ಆಡಳಿತ ನಡೆಸುವವರು ತಾವಾಗಿಯೇ ಕೆಳಗಿಳಿಯುತ್ತಾರೆಯೇ? ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕ್ರಮವೂ ರಾಜ್ಯಗಳ  ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿ: ದಲಿತ ವರನನ್ನು ಬಲವಂತವಾಗಿ ಕುದುರೆ ಮೇಲಿನಿಂದ ಇಳಿಸಿ ಜಾತಿ ನಿಂದನೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...