Homeಮುಖಪುಟತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

ತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

- Advertisement -
- Advertisement -

ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ತಮಿಳುನಾಡಿನ ಕೊಡೈಕೆನಾಲ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಲು ಕೇವಲ ಎಂಟು ದಿನಗಳನ್ನು ತೆಗೆದುಕೊಂಡಿದೆ. ಇದು ರಾಜ್ಯದ ವಿಚಾರಣಾ ನ್ಯಾಯಾಲಯವು ನೀಡಿದ ಅತ್ಯಂತ ವೇಗದ ತೀರ್ಪು ಎಂದು ಹೇಳಲಾಗುತ್ತದೆ.

ಪ್ರಾಸಿಕ್ಯೂಷನ್ ಪ್ರಕಾರ, ಫೆಬ್ರವರಿ 4ರಂದು ಕೊಡೈಕೆನಾಲ್ ನಿವಾಸಿಗಳಾದ ಜೆವಾ ಮತ್ತು ಬಾಲಮುರುಗನ್ ಎನ್ನುವವರು ಗಿರಿಧಾಮದ ಕೂಕಲ್ ಗ್ರಾಮದಲ್ಲಿ ಹೋಂಸ್ಟೇ ನಡೆಸುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಲಿಫ್ಟ್ ಕೇಳಿದರು.

ಈ ಇಬ್ಬರು ವ್ಯಕ್ತಿಗಳು ಮಹಿಳೆಗೆ ಪರಿಚಿತರಿರುವ ಕಾರಣ, ಅವರು ಲಿಫ್ಟ್ ನೀಡಲು ಮುಂದಾದರು. ಇಬ್ಬರೂ ವಾಹನವನ್ನು ಹತ್ತಿದ ಬಳಿಕ ಅವರು ಮಹಿಳೆಗೆ ಕಿರುಕುಳ ನೀಡಿದ್ದಾರೆ.

ಮಹಿಳೆ ಆ ಇಬ್ಬರ ಹಿಡಿತದಿಂದ ಹೊರಬರಲು ಸಾಧ್ಯವಾಗದೆ ಸಹಾಯಕ್ಕಾಗಿ ಧ್ವನಿ ಎತ್ತಿದ್ದಾರೆ. ಆಗ ದಾರಿಹೋಕರು ಏಣೋ ಗಲಾಟೆಯಾಗುತ್ತಿದೆ ಎಂದು ಸಂತ್ರಸ್ತೆಯ ರಕ್ಷಣೆಗೆ ಮುಂದಾದಾಗಿದ್ದಾರೆ. ತಕ್ಷಣ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಹಿಳೆ ಕೊಡೈಕೆನಾಲ್ ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳಿಬ್ಬರನ್ನೂ ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೇಳಿಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಪ್ರಕರಣವನ್ನು ಕೈಗೆತ್ತಿಕೊಂಡ ಕೊಡೈಕೆನಾಲ್‌ನ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ II ಎಸ್ ಕಾರ್ತಿಕ್, ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆ ಪ್ರಾರಂಭಿಸಿದರು ಮತ್ತು ಪೊಲೀಸರಿಂದ ತನಿಖೆಯ ಅಂತಿಮ ವರದಿಯನ್ನು ಕೇಳಿದರು. ಆರೋಪಿಗಳಿಗೆ ಕೊಡೈಕೆನಾಲ್ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ನೆರವು ನೀಡಲಾಯಿತು.

ಆರೋಪಗಳ ಮೇಲೆ ಸೆಕ್ಷನ್ 341 (ತಪ್ಪು ಸಂಯಮಕ್ಕೆ ಶಿಕ್ಷೆ), 294 (ಬಿ) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), ಭಾರತೀಯ ದಂಡ ಸಂಹಿತೆಯ (IPC) 354(A) (ಲೈಂಗಿಕ ಕಿರುಕುಳ) ಮತ್ತು ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯ್ದೆಯ ಸೆಕ್ಷನ್ 4 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮ್ಯಾಜಿಸ್ಟ್ರೇಟ್ ಈ ಪ್ರಕರಣವನ್ನು ದಿನನಿತ್ಯದ ವಿಚಾರಣೆಗೆ ಕೈಗೆತ್ತಿಕೊಂಡರು. ಸಂತ್ರಸ್ತೆ, ಆರೋಪಿಗಳು ಮತ್ತು ಸಾಕ್ಷಿಗಳ ಹೇಳಿಕೆಗಳು, ಎಕ್ಸಾಮಿನೇಷನ್-ಕ್ರಾಸ್ ಎಕ್ಸಮಿನೇಷನ್ ಮಾಡಿ ಎಲ್ಲವನ್ನೂ ದಾಖಲಿಸಲಾಗಿದೆ.

ಫೆಬ್ರವರಿ 12 ರಂದು ಪ್ರಕರಣದ ವಿಚಾರಣೆ ನಡೆದಿದ್ದು, ಮಹಿಳೆಯರ ಮೇಲಿನ ಅಪರಾಧವನ್ನು ಯಾವುದೇ ಸಂದರ್ಭದಲ್ಲೂ ಸಹಿಸಬಾರದು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗಮನಿಸುವುದರ ಮೂಲಕ ಮ್ಯಾಜಿಸ್ಟ್ರೇಟ್ ಕಾರ್ತಿಕ್ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಕಠಿಣ ಶಿಕ್ಷೆಯಿಂದ ಮಾತ್ರ ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಕಡಿಮೆಯಾಗುತ್ತವೆ ಎಂದು ಅವರು ಹೇಳಿದರು.

ಮ್ಯಾಜಿಸ್ಟ್ರೇಟ್ ಇಬ್ಬರೂ ಅಪರಾಧಿಗಳಿಗೆ ಎಂಟು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹ 20,000 ದಂಡ ವಿಧಿಸಿದರು. ಕೇವಲ ಎಂಟು ದಿನಗಳಲ್ಲಿ ನ್ಯಾಯಾಲಯದ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡಿವೆ.

ಈ ಹಿಂದೆ, ಬಿಹಾರದ ಅರಾರಿಯಾ ಜಿಲ್ಲೆಯ POCSO ನ್ಯಾಯಾಲಯವು, ಎಂಟು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಕೇವಲ ಒಂದು ದಿನದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...