Homeಮುಖಪುಟತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

ತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

- Advertisement -
- Advertisement -

ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ತಮಿಳುನಾಡಿನ ಕೊಡೈಕೆನಾಲ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಲು ಕೇವಲ ಎಂಟು ದಿನಗಳನ್ನು ತೆಗೆದುಕೊಂಡಿದೆ. ಇದು ರಾಜ್ಯದ ವಿಚಾರಣಾ ನ್ಯಾಯಾಲಯವು ನೀಡಿದ ಅತ್ಯಂತ ವೇಗದ ತೀರ್ಪು ಎಂದು ಹೇಳಲಾಗುತ್ತದೆ.

ಪ್ರಾಸಿಕ್ಯೂಷನ್ ಪ್ರಕಾರ, ಫೆಬ್ರವರಿ 4ರಂದು ಕೊಡೈಕೆನಾಲ್ ನಿವಾಸಿಗಳಾದ ಜೆವಾ ಮತ್ತು ಬಾಲಮುರುಗನ್ ಎನ್ನುವವರು ಗಿರಿಧಾಮದ ಕೂಕಲ್ ಗ್ರಾಮದಲ್ಲಿ ಹೋಂಸ್ಟೇ ನಡೆಸುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಲಿಫ್ಟ್ ಕೇಳಿದರು.

ಈ ಇಬ್ಬರು ವ್ಯಕ್ತಿಗಳು ಮಹಿಳೆಗೆ ಪರಿಚಿತರಿರುವ ಕಾರಣ, ಅವರು ಲಿಫ್ಟ್ ನೀಡಲು ಮುಂದಾದರು. ಇಬ್ಬರೂ ವಾಹನವನ್ನು ಹತ್ತಿದ ಬಳಿಕ ಅವರು ಮಹಿಳೆಗೆ ಕಿರುಕುಳ ನೀಡಿದ್ದಾರೆ.

ಮಹಿಳೆ ಆ ಇಬ್ಬರ ಹಿಡಿತದಿಂದ ಹೊರಬರಲು ಸಾಧ್ಯವಾಗದೆ ಸಹಾಯಕ್ಕಾಗಿ ಧ್ವನಿ ಎತ್ತಿದ್ದಾರೆ. ಆಗ ದಾರಿಹೋಕರು ಏಣೋ ಗಲಾಟೆಯಾಗುತ್ತಿದೆ ಎಂದು ಸಂತ್ರಸ್ತೆಯ ರಕ್ಷಣೆಗೆ ಮುಂದಾದಾಗಿದ್ದಾರೆ. ತಕ್ಷಣ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಹಿಳೆ ಕೊಡೈಕೆನಾಲ್ ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳಿಬ್ಬರನ್ನೂ ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೇಳಿಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಪ್ರಕರಣವನ್ನು ಕೈಗೆತ್ತಿಕೊಂಡ ಕೊಡೈಕೆನಾಲ್‌ನ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ II ಎಸ್ ಕಾರ್ತಿಕ್, ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆ ಪ್ರಾರಂಭಿಸಿದರು ಮತ್ತು ಪೊಲೀಸರಿಂದ ತನಿಖೆಯ ಅಂತಿಮ ವರದಿಯನ್ನು ಕೇಳಿದರು. ಆರೋಪಿಗಳಿಗೆ ಕೊಡೈಕೆನಾಲ್ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ನೆರವು ನೀಡಲಾಯಿತು.

ಆರೋಪಗಳ ಮೇಲೆ ಸೆಕ್ಷನ್ 341 (ತಪ್ಪು ಸಂಯಮಕ್ಕೆ ಶಿಕ್ಷೆ), 294 (ಬಿ) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), ಭಾರತೀಯ ದಂಡ ಸಂಹಿತೆಯ (IPC) 354(A) (ಲೈಂಗಿಕ ಕಿರುಕುಳ) ಮತ್ತು ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯ್ದೆಯ ಸೆಕ್ಷನ್ 4 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮ್ಯಾಜಿಸ್ಟ್ರೇಟ್ ಈ ಪ್ರಕರಣವನ್ನು ದಿನನಿತ್ಯದ ವಿಚಾರಣೆಗೆ ಕೈಗೆತ್ತಿಕೊಂಡರು. ಸಂತ್ರಸ್ತೆ, ಆರೋಪಿಗಳು ಮತ್ತು ಸಾಕ್ಷಿಗಳ ಹೇಳಿಕೆಗಳು, ಎಕ್ಸಾಮಿನೇಷನ್-ಕ್ರಾಸ್ ಎಕ್ಸಮಿನೇಷನ್ ಮಾಡಿ ಎಲ್ಲವನ್ನೂ ದಾಖಲಿಸಲಾಗಿದೆ.

ಫೆಬ್ರವರಿ 12 ರಂದು ಪ್ರಕರಣದ ವಿಚಾರಣೆ ನಡೆದಿದ್ದು, ಮಹಿಳೆಯರ ಮೇಲಿನ ಅಪರಾಧವನ್ನು ಯಾವುದೇ ಸಂದರ್ಭದಲ್ಲೂ ಸಹಿಸಬಾರದು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗಮನಿಸುವುದರ ಮೂಲಕ ಮ್ಯಾಜಿಸ್ಟ್ರೇಟ್ ಕಾರ್ತಿಕ್ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಕಠಿಣ ಶಿಕ್ಷೆಯಿಂದ ಮಾತ್ರ ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಕಡಿಮೆಯಾಗುತ್ತವೆ ಎಂದು ಅವರು ಹೇಳಿದರು.

ಮ್ಯಾಜಿಸ್ಟ್ರೇಟ್ ಇಬ್ಬರೂ ಅಪರಾಧಿಗಳಿಗೆ ಎಂಟು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹ 20,000 ದಂಡ ವಿಧಿಸಿದರು. ಕೇವಲ ಎಂಟು ದಿನಗಳಲ್ಲಿ ನ್ಯಾಯಾಲಯದ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡಿವೆ.

ಈ ಹಿಂದೆ, ಬಿಹಾರದ ಅರಾರಿಯಾ ಜಿಲ್ಲೆಯ POCSO ನ್ಯಾಯಾಲಯವು, ಎಂಟು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಕೇವಲ ಒಂದು ದಿನದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...