Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....