Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...