Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....