Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...