Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...