Homeಮುಖಪುಟತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ...

ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ

- Advertisement -
- Advertisement -

ತಮಿಳುನಾಡಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ರಾಜ್ಯದ ತಿರುವಲ್ಲೂರ್ ಪಶ್ಚಿಮದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಸತೀಶ್ ಕುಮಾರ್ ಎಂಬುವವರು ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ದುಷ್ಕರ್ಮಿಗಳಿಂದ ನಡೆದ ಕೃತ್ಯ ಎಂದು ದೂರು ನೀಡಿ ಈಗ ಸಿಕ್ಕಿಬಿದ್ದಿದ್ದಾರೆ.

ಏಪ್ರಿಲ್ 14ರ ರಾತ್ರಿ ಸತೀಶ್ ಕುಮಾರ್ ಎಂಬುವವರು ‘ತನ್ನ ಕಾರಿನ ಮೇಲೆ ಪೆಟ್ರೋಲ್ ದಾಳಿ ನಡೆದಿದೆ, ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರಿಗೆ ದೂರು ನೀಡಿದ್ದರು. ಚೆನ್ನೈನ ಮಧುರವಾಯಲ್ ಪ್ರದೇಶದಲ್ಲಿರುವ ಅವರ ಮನೆಯ ಎದುರು ನಿಲ್ಲಿಸಲಾಗಿದ್ದ ಕಾರಿಗೆ ಹಾನಿಯುಂಟಾಗಿದೆ ಎಂದು ಆರೋಪಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು. ಆ ರಸ್ತೆಯಲ್ಲಿರುವ ಸುತ್ತಲಿನ ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದರು. ರಸ್ತೆ ಬದಿಯಲ್ಲಿದ್ದ ಒಂದು ಮನೆ ಮುಂದಿನ ಸಿಸಿಟಿವಿಯಲ್ಲಿ ಘಟನೆಯ ಪೂರ್ಣ ದೃಶ್ಯಗಳು ಸೆರೆಯಾಗಿದ್ದವು. ಅದರಲ್ಲಿ ಸ್ಕಾರ್ಪಿಯೊ ಕಾರು ಮನೆ ಮುಂದೆ ನಿಂತಿದ್ದಾಗ ಅಲ್ಲಿಗೆ ಸೈಕಲ್‌ನಲ್ಲಿ ಬಂದ ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಬಾಲಕನೊಬ್ಬ ಕಾರಿನ ಕಿಟಕಿಯಲ್ಲಿ ಇಣುಕಿ ನೋಡಿ ಅಲ್ಲಿಂದ ಹೊರಡುತ್ತಾರೆ. ಸ್ವಲ್ಪ ಸಮಯದಲ್ಲಿಯೇ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಬಂದು ಕಾರಿಗೆ ಪೆಟ್ರೋಲ್ ರೀತಿಯ ವಸ್ತುವನ್ನು ಸುರಿದು ಬೆಂಕಿ ಹಚ್ಚಿ ಪರಾರಿಯಾಗುವುದು ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಉದ್ವಿಗ್ನ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅಭಿಷೇಕ್ ಹೀರೆಮಠ ಬಂಧನ

ತದನಂತರ ಅಕ್ಕಪಕ್ಕದ ಮನೆಯ ಜನರು ಹೊರಬಂದು ಕಾರಿಗೆ ಬೆಂಕಿ ಬಿದ್ದಿರುವುದನ್ನು ಬಿಜೆಪಿ ಮುಖಂಡನ ಕುಟುಂಬದ ಗಮನಕ್ಕೆ ತರುತ್ತಾರೆ. ಪೊಲೀಸರಿಗೆ ಕರೆ ಮಾಡಿ ಪೆಟ್ರೋಲ್ ಬಾಂಬ್ ಹಾಕಿರಬಹುದೆಂದು ಅನುಮಾನ ವ್ಯಕ್ತಪಡಿಸಿರುತ್ತಾರೆ.

ಆದರೆ ದೂರು ನೀಡಿದ ಬಿಜೆಪಿ ಮುಖಂಡ ಸತೀಶ್ ನಡವಳಿಕೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರಿಗೆ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ ಸತೀಶ್ ಕುಮಾರ್ ಅವರನ್ನೇ ಹೋಲುತ್ತಿದ್ದಾನೆ ಎಂದು ಶಂಕಿಸಿದ್ದಾರೆ. ಪೊಲೀಸರು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸತೀಶ್ ತನ್ನ ಸ್ವಂತ ಕಾರಿಗೆ ತಾನೇ ಬೆಂಕಿ ಹಚ್ಚಿರುವುದಾಗಿ ಒಪ್ಪಿಕೊಂಡಿದ್ದಾನೆ!

ಬೆಂಕಿ ಹಚ್ಚಲು ಕಾರಣವೇನು?

ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಲು ಕಾರಣವೇನೆಂದು ಸತೀಶ್ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. “ನನ್ನ ಪತ್ನಿ ಒಡವೆಗಳನ್ನು ಕೊಡಿಸುವಂತೆ ಪದೇ ಪದೇ ಒತ್ತಾಯ ಮಾಡುತ್ತಿದ್ದಳು. ಆದರೆ ನನಗೆ ಕೊಡಿಸಲು ಆಗಿರಲಿಲ್ಲ. ನನ್ನ ಬಳಿ ಹಣವಿಲ್ಲವೆಂದು ಹೇಳಿದರೂ ಕೇಳದೆ ಕಾರನ್ನು ಮಾರಿಯಾದರೂ ಒಡವೆ ಕೊಡಿಸಿ ಎಂದು ದುಂಬಾಲು ಬಿದ್ದಿದ್ದಳು. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿ ಬರುವ ಇನ್ಶೂರೆನ್ಸ್ ಹಣದಲ್ಲಿ ಒಡವೆ ಕೊಡಿಸಲು ಈ ಕೃತ್ಯ ಎಸಗಿದೆ” ಎಂದು ಒಪ್ಪಿಕೊಂಡಿದ್ದಾನೆ.

ಈ ಕೃತ್ಯದ ಕುರಿತು ಪ್ರಕರಣ ದಾಖಲಿಸಿದರು ಪೊಲೀಸರು ಸತೀಶ್‌ಕುಮಾರ್‌ನನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...