Homeಮುಖಪುಟತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ...

ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ

- Advertisement -
- Advertisement -

ತಮಿಳುನಾಡಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ರಾಜ್ಯದ ತಿರುವಲ್ಲೂರ್ ಪಶ್ಚಿಮದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಸತೀಶ್ ಕುಮಾರ್ ಎಂಬುವವರು ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ದುಷ್ಕರ್ಮಿಗಳಿಂದ ನಡೆದ ಕೃತ್ಯ ಎಂದು ದೂರು ನೀಡಿ ಈಗ ಸಿಕ್ಕಿಬಿದ್ದಿದ್ದಾರೆ.

ಏಪ್ರಿಲ್ 14ರ ರಾತ್ರಿ ಸತೀಶ್ ಕುಮಾರ್ ಎಂಬುವವರು ‘ತನ್ನ ಕಾರಿನ ಮೇಲೆ ಪೆಟ್ರೋಲ್ ದಾಳಿ ನಡೆದಿದೆ, ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರಿಗೆ ದೂರು ನೀಡಿದ್ದರು. ಚೆನ್ನೈನ ಮಧುರವಾಯಲ್ ಪ್ರದೇಶದಲ್ಲಿರುವ ಅವರ ಮನೆಯ ಎದುರು ನಿಲ್ಲಿಸಲಾಗಿದ್ದ ಕಾರಿಗೆ ಹಾನಿಯುಂಟಾಗಿದೆ ಎಂದು ಆರೋಪಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು. ಆ ರಸ್ತೆಯಲ್ಲಿರುವ ಸುತ್ತಲಿನ ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದರು. ರಸ್ತೆ ಬದಿಯಲ್ಲಿದ್ದ ಒಂದು ಮನೆ ಮುಂದಿನ ಸಿಸಿಟಿವಿಯಲ್ಲಿ ಘಟನೆಯ ಪೂರ್ಣ ದೃಶ್ಯಗಳು ಸೆರೆಯಾಗಿದ್ದವು. ಅದರಲ್ಲಿ ಸ್ಕಾರ್ಪಿಯೊ ಕಾರು ಮನೆ ಮುಂದೆ ನಿಂತಿದ್ದಾಗ ಅಲ್ಲಿಗೆ ಸೈಕಲ್‌ನಲ್ಲಿ ಬಂದ ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಬಾಲಕನೊಬ್ಬ ಕಾರಿನ ಕಿಟಕಿಯಲ್ಲಿ ಇಣುಕಿ ನೋಡಿ ಅಲ್ಲಿಂದ ಹೊರಡುತ್ತಾರೆ. ಸ್ವಲ್ಪ ಸಮಯದಲ್ಲಿಯೇ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಬಂದು ಕಾರಿಗೆ ಪೆಟ್ರೋಲ್ ರೀತಿಯ ವಸ್ತುವನ್ನು ಸುರಿದು ಬೆಂಕಿ ಹಚ್ಚಿ ಪರಾರಿಯಾಗುವುದು ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಉದ್ವಿಗ್ನ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅಭಿಷೇಕ್ ಹೀರೆಮಠ ಬಂಧನ

ತದನಂತರ ಅಕ್ಕಪಕ್ಕದ ಮನೆಯ ಜನರು ಹೊರಬಂದು ಕಾರಿಗೆ ಬೆಂಕಿ ಬಿದ್ದಿರುವುದನ್ನು ಬಿಜೆಪಿ ಮುಖಂಡನ ಕುಟುಂಬದ ಗಮನಕ್ಕೆ ತರುತ್ತಾರೆ. ಪೊಲೀಸರಿಗೆ ಕರೆ ಮಾಡಿ ಪೆಟ್ರೋಲ್ ಬಾಂಬ್ ಹಾಕಿರಬಹುದೆಂದು ಅನುಮಾನ ವ್ಯಕ್ತಪಡಿಸಿರುತ್ತಾರೆ.

ಆದರೆ ದೂರು ನೀಡಿದ ಬಿಜೆಪಿ ಮುಖಂಡ ಸತೀಶ್ ನಡವಳಿಕೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರಿಗೆ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ ಸತೀಶ್ ಕುಮಾರ್ ಅವರನ್ನೇ ಹೋಲುತ್ತಿದ್ದಾನೆ ಎಂದು ಶಂಕಿಸಿದ್ದಾರೆ. ಪೊಲೀಸರು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸತೀಶ್ ತನ್ನ ಸ್ವಂತ ಕಾರಿಗೆ ತಾನೇ ಬೆಂಕಿ ಹಚ್ಚಿರುವುದಾಗಿ ಒಪ್ಪಿಕೊಂಡಿದ್ದಾನೆ!

ಬೆಂಕಿ ಹಚ್ಚಲು ಕಾರಣವೇನು?

ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಲು ಕಾರಣವೇನೆಂದು ಸತೀಶ್ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. “ನನ್ನ ಪತ್ನಿ ಒಡವೆಗಳನ್ನು ಕೊಡಿಸುವಂತೆ ಪದೇ ಪದೇ ಒತ್ತಾಯ ಮಾಡುತ್ತಿದ್ದಳು. ಆದರೆ ನನಗೆ ಕೊಡಿಸಲು ಆಗಿರಲಿಲ್ಲ. ನನ್ನ ಬಳಿ ಹಣವಿಲ್ಲವೆಂದು ಹೇಳಿದರೂ ಕೇಳದೆ ಕಾರನ್ನು ಮಾರಿಯಾದರೂ ಒಡವೆ ಕೊಡಿಸಿ ಎಂದು ದುಂಬಾಲು ಬಿದ್ದಿದ್ದಳು. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿ ಬರುವ ಇನ್ಶೂರೆನ್ಸ್ ಹಣದಲ್ಲಿ ಒಡವೆ ಕೊಡಿಸಲು ಈ ಕೃತ್ಯ ಎಸಗಿದೆ” ಎಂದು ಒಪ್ಪಿಕೊಂಡಿದ್ದಾನೆ.

ಈ ಕೃತ್ಯದ ಕುರಿತು ಪ್ರಕರಣ ದಾಖಲಿಸಿದರು ಪೊಲೀಸರು ಸತೀಶ್‌ಕುಮಾರ್‌ನನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...