Homeಮುಖಪುಟತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ...

ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ

- Advertisement -
- Advertisement -

ತಮಿಳುನಾಡಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ರಾಜ್ಯದ ತಿರುವಲ್ಲೂರ್ ಪಶ್ಚಿಮದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಸತೀಶ್ ಕುಮಾರ್ ಎಂಬುವವರು ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ದುಷ್ಕರ್ಮಿಗಳಿಂದ ನಡೆದ ಕೃತ್ಯ ಎಂದು ದೂರು ನೀಡಿ ಈಗ ಸಿಕ್ಕಿಬಿದ್ದಿದ್ದಾರೆ.

ಏಪ್ರಿಲ್ 14ರ ರಾತ್ರಿ ಸತೀಶ್ ಕುಮಾರ್ ಎಂಬುವವರು ‘ತನ್ನ ಕಾರಿನ ಮೇಲೆ ಪೆಟ್ರೋಲ್ ದಾಳಿ ನಡೆದಿದೆ, ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರಿಗೆ ದೂರು ನೀಡಿದ್ದರು. ಚೆನ್ನೈನ ಮಧುರವಾಯಲ್ ಪ್ರದೇಶದಲ್ಲಿರುವ ಅವರ ಮನೆಯ ಎದುರು ನಿಲ್ಲಿಸಲಾಗಿದ್ದ ಕಾರಿಗೆ ಹಾನಿಯುಂಟಾಗಿದೆ ಎಂದು ಆರೋಪಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು. ಆ ರಸ್ತೆಯಲ್ಲಿರುವ ಸುತ್ತಲಿನ ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದರು. ರಸ್ತೆ ಬದಿಯಲ್ಲಿದ್ದ ಒಂದು ಮನೆ ಮುಂದಿನ ಸಿಸಿಟಿವಿಯಲ್ಲಿ ಘಟನೆಯ ಪೂರ್ಣ ದೃಶ್ಯಗಳು ಸೆರೆಯಾಗಿದ್ದವು. ಅದರಲ್ಲಿ ಸ್ಕಾರ್ಪಿಯೊ ಕಾರು ಮನೆ ಮುಂದೆ ನಿಂತಿದ್ದಾಗ ಅಲ್ಲಿಗೆ ಸೈಕಲ್‌ನಲ್ಲಿ ಬಂದ ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಬಾಲಕನೊಬ್ಬ ಕಾರಿನ ಕಿಟಕಿಯಲ್ಲಿ ಇಣುಕಿ ನೋಡಿ ಅಲ್ಲಿಂದ ಹೊರಡುತ್ತಾರೆ. ಸ್ವಲ್ಪ ಸಮಯದಲ್ಲಿಯೇ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಬಂದು ಕಾರಿಗೆ ಪೆಟ್ರೋಲ್ ರೀತಿಯ ವಸ್ತುವನ್ನು ಸುರಿದು ಬೆಂಕಿ ಹಚ್ಚಿ ಪರಾರಿಯಾಗುವುದು ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಉದ್ವಿಗ್ನ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅಭಿಷೇಕ್ ಹೀರೆಮಠ ಬಂಧನ

ತದನಂತರ ಅಕ್ಕಪಕ್ಕದ ಮನೆಯ ಜನರು ಹೊರಬಂದು ಕಾರಿಗೆ ಬೆಂಕಿ ಬಿದ್ದಿರುವುದನ್ನು ಬಿಜೆಪಿ ಮುಖಂಡನ ಕುಟುಂಬದ ಗಮನಕ್ಕೆ ತರುತ್ತಾರೆ. ಪೊಲೀಸರಿಗೆ ಕರೆ ಮಾಡಿ ಪೆಟ್ರೋಲ್ ಬಾಂಬ್ ಹಾಕಿರಬಹುದೆಂದು ಅನುಮಾನ ವ್ಯಕ್ತಪಡಿಸಿರುತ್ತಾರೆ.

ಆದರೆ ದೂರು ನೀಡಿದ ಬಿಜೆಪಿ ಮುಖಂಡ ಸತೀಶ್ ನಡವಳಿಕೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರಿಗೆ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ ಸತೀಶ್ ಕುಮಾರ್ ಅವರನ್ನೇ ಹೋಲುತ್ತಿದ್ದಾನೆ ಎಂದು ಶಂಕಿಸಿದ್ದಾರೆ. ಪೊಲೀಸರು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸತೀಶ್ ತನ್ನ ಸ್ವಂತ ಕಾರಿಗೆ ತಾನೇ ಬೆಂಕಿ ಹಚ್ಚಿರುವುದಾಗಿ ಒಪ್ಪಿಕೊಂಡಿದ್ದಾನೆ!

ಬೆಂಕಿ ಹಚ್ಚಲು ಕಾರಣವೇನು?

ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಲು ಕಾರಣವೇನೆಂದು ಸತೀಶ್ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. “ನನ್ನ ಪತ್ನಿ ಒಡವೆಗಳನ್ನು ಕೊಡಿಸುವಂತೆ ಪದೇ ಪದೇ ಒತ್ತಾಯ ಮಾಡುತ್ತಿದ್ದಳು. ಆದರೆ ನನಗೆ ಕೊಡಿಸಲು ಆಗಿರಲಿಲ್ಲ. ನನ್ನ ಬಳಿ ಹಣವಿಲ್ಲವೆಂದು ಹೇಳಿದರೂ ಕೇಳದೆ ಕಾರನ್ನು ಮಾರಿಯಾದರೂ ಒಡವೆ ಕೊಡಿಸಿ ಎಂದು ದುಂಬಾಲು ಬಿದ್ದಿದ್ದಳು. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿ ಬರುವ ಇನ್ಶೂರೆನ್ಸ್ ಹಣದಲ್ಲಿ ಒಡವೆ ಕೊಡಿಸಲು ಈ ಕೃತ್ಯ ಎಸಗಿದೆ” ಎಂದು ಒಪ್ಪಿಕೊಂಡಿದ್ದಾನೆ.

ಈ ಕೃತ್ಯದ ಕುರಿತು ಪ್ರಕರಣ ದಾಖಲಿಸಿದರು ಪೊಲೀಸರು ಸತೀಶ್‌ಕುಮಾರ್‌ನನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...