ತಮಿಳುನಾಡಿನ ಅರಿಯಲೂರಿನಲ್ಲಿ ಬಿಜೆಪಿ ನಾಯಕನೋರ್ವನನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆಯ ಕೆಲವು ನಾಯಕರ ಬಗ್ಗೆ ಅವಹೇಳನಕಾರಿ ಪೋಟೋಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ಬಿಜೆಪಿ ನಾಯಕ ವಡುಗಪಾಳ್ಯಂ ನಿವಾಸಿ ಸುರೇಶ್ ಬಂಧಿತರು.
ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ, ಮನೋ ತಂಗರಾಜ್, ಪಿಟಿಆರ್ ತ್ಯಾಗರಾಜನ್, ತಮಿಳುನಾಡು ಸಿಎಂ ಸಂಬಂಧಿ ಶಬರೇಶನ್, ಡಿಎಂಕೆ ಸಂಸದ ಟಿಆರ್ ಬಾಲು ಮತ್ತು ಸಂಸದ ತಿರುಮಾವಲವನ್ ವಿರುದ್ಧ ಈತ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಟೋವನ್ನು ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಮಧುರೈ ಪೊಲೀಸರು ಬಿಜೆಪಿ ನಾಯಕ ಸುರೇಶ್ನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಓದಿ: ರಾಂಚಿ: ಮೋದಿ ಭೇಟಿ ವೇಳೆ ಭದ್ರತಾ ಲೋಪ ಆರೋಪ; ಮೂವರು ಪೊಲೀಸರ ಅಮಾನತು