Homeಮುಖಪುಟತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ

ತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ

- Advertisement -
- Advertisement -

ಮಹಿಳೆಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸಿದ ವಿಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಆದ ಬಳಿಕ  ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಮಹಿಳೆಯೊಂದಿಗೆ ಅಶ್ಲೀಲ ಕರೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೊ ಬಹಿರಂಗ ಮಾಡಲಾಗಿದೆ. ಬಿಜೆಪಿಯ ಸದಸ್ಯರೆ ಆಗಿರುವ ಮದನ್ ರವಿಚಂದ್ರನ್ ಈ ವಿಡಿಯೊ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿದ್ದಾರೆ.

ಕಳೆದ ವರ್ಷ ಬಿಜೆಪಿ ಸೇರಿದ್ದ ಮದನ್ ರವಿಚಂದ್ರನ್, 1,41,000 ಚಂದಾದಾರರೊಂದಿಗೆ ಚಾನೆಲ್ ನಡೆಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪದ ತನಿಖೆಯ ಭಾಗವಾಗಿ ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

15 ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಿಡಿಯೋ ಸಾಕ್ಷ್ಯವಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾಧ್ಯಮಗಳು ರಾಘವನ್ ಅವರನ್ನು ಮಿಸ್ಟರ್‌ ಕ್ಲೀನ್ ಎಂದು ಪ್ರಚಾರ ಮಾಡುತ್ತಿರುವುದರಿಂದ ಅವರ ವಿಡಿಯೊವನ್ನು ಮೊದಲು ಬಿಡುಗಡೆ ಮಾಡಲು ಆಯ್ಕೆ ಮಾಡಿಕೊಂಡೆ ಎಂದು ರವಿಚಂದ್ರನ್ ಹೇಳಿದ್ದಾರೆ.

ರಾಘವನ್ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಜೊತೆಗೆ ಅವುಗಳನ್ನು ಕಾನೂನುಬದ್ಧವಾಗಿ ಎದುರಿಸುವುದಾಗಿ ಹೇಳಿದ್ದಾರೆ.

“ಧರ್ಮ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿರುವ ಅವರು, ತಮ್ಮ 30 ವರ್ಷಗಳ ವೃತ್ತಿಜೀವನವನ್ನು ಯಾವುದೇ ತೊಂದರೆಗಳಿಲ್ಲದೆ ನಡೆಸಿರುವುದಾಗಿ, ತಮ್ಮ ಇಮೇಜ್ ಅನ್ನು ಹಾಳುಮಾಡಲು ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ ಜನರಿಗೆ ನಾನು ಯಾರೆಂದು ತಿಳಿದಿದೆ. ನನ್ನೊಂದಿಗೆ ಸಂಬಂಧ ಹೊಂದಿರುವವರಿಗೆ ನಾನು ಯಾರೆಂದು ತಿಳಿದಿದೆ” ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ವಿಡಿಯೊವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ ಬಳಿಕ ವಿಡಿಯೊ ಅಪ್ಲೋಡ್ ಮಾಡಿರುವುದಾಗಿ ಮದನ್ ರವಿಚಂದ್ರನ್ ಹೇಳಿದ್ದಾರೆ. ಅಣ್ಣಾಮಲೈ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ನೀಡಿದ್ದೇನೆ ಎಂದು ರಾಘವನ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದೆ ಜೋತಿಮಣಿ ಅವರು ರಾಘವನ್ ವಿರುದ್ಧ ಪೊಲೀಸರಿಗೆ ದೂರು ನೀಡಲಿದ್ದೇವೆ ಎಂದು ಹೇಳಿದ್ದಾರೆ. “ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಕ್ಕೆ ವಿಡಿಯೋ ಸಾಕ್ಷ್ಯವಿದೆ. ಅದರ ಕುರಿತು ತನಿಖೆ ಮಾಡಬೇಕು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮುಖಂಡರ ತಿರುಚಿ‌ದ ಟ್ವೀಟ್ ಅವಲಂಬಿಸಿ ಪೊಲೀಸರಿಂದ ಎಫ್‌ಐಆರ್‌ ದಾಖಲು: ಉಮರ್ ಖಾಲಿದ್ ವಕೀಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...