Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...