Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...