Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...