Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...