Homeಮುಖಪುಟತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

- Advertisement -
- Advertisement -

ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷಗಳಿಗೆ ಮನ್ನಣೆ ಹೆಚ್ಚು. ಪ್ರಾದೇಶಿಕ ಪಕ್ಷಗಳ ನಾಯಕರುಗಳಿಗೆ ಇರುವ ಬೆಲೆ ಗೌರವ, ಅವರ ಬಗ್ಗೆ ಇರುವ ನಂಬಿಕೆ, ರಾಷ್ಟ್ರೀಯ ಪಕ್ಷ ಬಿಜೆಪಿ ನಾಯಕರುಗಳಿಗೆ ಇಲ್ಲಿ ದೊರೆಯುವುದು ಅಸಾಧ್ಯ. ಇದಕ್ಕೆ ತಮಿಳುನಾಡಿನಲ್ಲಿ ರಾರಾಜಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪೋಸ್ಟರ್‌ಗಳೇ ಸಾಕ್ಷಿಯಾಗಿವೆ. ಸದ್ಯ ನಡೆಯುತ್ತಿರುವ ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು, ಅದರಲ್ಲಿಯೂ ಪ್ರಧಾನಿ ಮೋದಿ ಚಿತ್ರವನ್ನು ಪ್ರಚಾರದಲ್ಲಿ ಬಳಸಲು ಬಿಜೆಪಿ ಅಭ್ಯರ್ಥಿಯೊಬ್ಬರು ಹಿಂದೇಟು ಹಾಕುತ್ತಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ 50 ವರ್ಷದ ವನತಿ ಶ್ರೀನಿವಾಸನ್‌ರವರ ಚುನಾವಣಾ ಪ್ರಚಾರಗಳ ಬ್ಯಾನರ್‌ಗಳಲ್ಲಿ ಮತ್ತು ಕರಪತ್ರದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಯಾರು ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.

ಆದರೆ ಅವರ ಬ್ಯಾನರ್‌ಗಳಲ್ಲಿ ತಮ್ಮ ಮಿತ್ರ ಪಕ್ಷ ಎಐಎಡಿಎಂಕೆಯ ಮುಖ್ಯಮಂತ್ರಿ ಎಡಪಡ್ಡಿ ಕೆ ಪಳನಿಸ್ವಾಮಿ ,ಉಪ ಮುಖ್ಯಮಂತ್ರಿ ಓ ಪನ್ನಿರ ಸೆಲ್ವಂ, ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಚಿತ್ರಗಳು ಕಾಣಿಸಿಕೊಂಡಿವೆ!

 

ತಮ್ಮ ಪ್ರಣಾಳಿಕೆಯ ಮುಖ್ಯಾಂಶಗಳಿರುವ ಈ ಪೋಸ್ಟರ್‌ನಲ್ಲಿ ಬಿಜೆಪಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಸೇರಿದಂತೆ ತಮಿಳುನಾಡು ಚುನಾವಣಾ ಉಸ್ತುವಾರಿ ಸಿ.ಟಿ.ರವಿ ಚಿತ್ರಗಳು ಕಾಣಿಸಿಕೊಂಡಿಲ್ಲ. ಇವರ ಚಿತ್ರಗಳನ್ನು ಎಲ್ಲೂ ಬಳಸಿಕೊಂಡಿಲ್ಲ.

ಇಷ್ಟೇ ಅಲ್ಲದೆ ವನತಿ ಶ್ರೀನಿವಾಸನ್ ತಮಿಳುನಾಡಿನಲ್ಲಿ ಉತ್ತಮ ಹೆಸರು ಪಡೆದಿದ್ದಾರೆ. 2016ರ ಚುನಾವಣೆಯಲ್ಲಿ ಕಾಫಿ ವಿತ್ ವನತಿ, ವನತಿಯನ್ನು ಕೇಳಿ ಎಂಬ ವಿಭಿನ್ನ ಚುನಾವಣಾ ಐಡಿಯಾಗಳಿಂದ ಈಕೆ ತಮಿಳುನಾಡಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಮಕ್ಕಳ್ ನೀಧಿ ಮಯ್ಯಂ ಪಕ್ಷದಿಮದ ನಟ, ರಾಜಕಾರಣಿ ಕಮಲ್ ಹಾಸನ್ ಕಣ್ಕಕೆ ಇಳಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ವನತಿ ಶ್ರೀನಿವಾಸನ್ ಪ್ರಚಾರವನ್ನು ಚುರುಕುಗೊಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದರೂ ಕೂಡ ಮಿತ್ರ ಪಕ್ಷ ಎಐಎಡಿಎಂಕೆ ನಾಯಕರುಗಳ ಮುಖಗಳೊಂದಿಗೆ ಚುನಾವಣೆಯನ್ನು ಎದುರಿಸಲು ರೆಡಿಯಾಗಿದ್ದಾರೆ.

ಒಟ್ಟಾರೆ, ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸುವ ತಮಿಳುನಾಡಿನಲ್ಲಿ ಬಿಜೆಪಿಗೆ ಯಾವುದೇ ಮನ್ನಣೆ ಇಲ್ಲ. ಸಮಾವೇಶಗಳಲ್ಲಿ ಭಾರಿ ಸಂಖ್ಯೆಯಲ್ಲಿ ಸೇರುವ ಜನರು ಬಿಜೆಪಿಯ ಮತಗಳಾಗಿ ಮಾರ್ಪಾಡಾಗುವುದು ಕಷ್ಟ ಎಂಬುದು ನಾಯಕುಗಳಿಗೆ ತಿಳಿದಿರುವಂತಿದೆ. ಇದೆ ಕಾರಣಕ್ಕೆ ತಮ್ಮ ಪಕ್ಷದ ಅಭ್ಯರ್ಥಿಗಳ ಪೋಸ್ಟರ್‌, ಬ್ಯಾನರ್‌ಗಳಲ್ಲೂ ಮಿತ್ರಪಕ್ಷದ ನಾಯಕರುಗಳ ಚಿತ್ರಗಳನ್ನೇ ಹಾಕಿ ಮತಯಾಚನೆ ಮಾಡಲಾಗುತ್ತಿದೆ. ಬಿಜೆಪಿ ನಾಯಕರ ಚಿತ್ರಗಳನ್ನು ಬಳಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...