Homeಮುಖಪುಟತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಆರೋಪಿಸಿ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಪ್ಪಕುಡಿ ಗ್ರಾಮ ಪಂಚಾಯತ್‌ನ ಡಿಎಂಕೆ ಬೆಂಬಲಿತ ಅಧ್ಯಕ್ಷೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿನ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ತಾರತಮ್ಯ ಆರೋಪ ಮಾಡಿರುವ ಬಗ್ಗೆ ಸುದ್ದಿಯಾಗಿರುವ ಎರಡನೇ ಪ್ರಕರಣ ಇದಾಗಿದೆ.

ಪಪ್ಪಕುಡಿ ಪಂಚಾಯತ್‌ನ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಅಧ್ಯಕ್ಷೆ ಪೂಂಗೊಥೈ ಶಶಿಕುಮಾರ್ ಅವರು ಇತ್ತೀಚೆಗೆ ತಿರುನಲ್ವೇಲಿ ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಮತ್ತು ಡಿಎಂಕೆ ನಾಯಕರಿಗೆ ತನ್ನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅತಿ ಹಿಂದುಳಿದ ವರ್ಗದವರಾದ ಪಂಚಾಯತ್ ಉಪಾಧ್ಯಕ್ಷರು ಜಾತಿ ಆಧಾರಿತ ತಾರತಮ್ಯ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ಪೂಂಗೊಥೈ ಶಶಿಕುಮಾರ್ ಅವರು ಜಾತಿ ತಾರತಮ್ಯ ಆರೋಪಿಸಿ ಎರಡು ವರ್ಷಗಳ ಹಿಂದೆ ತಮ್ಮ ಹುದ್ದೆಯನ್ನು ತ್ಯಜಿಸಲು ಮುಂದಾಗಿದ್ದರು. ಅಂದಿನ ಕಲೆಕ್ಟರ್ ವಿ ವಿಷ್ಣು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆದರೆ, ಡಿಎಂಕೆ ಪಕ್ಷದ ನಾಯಕತ್ವವು ಪೂಂಗೊಥೈ ಅವರ ಮನವೊಲಿಸಿ ಮುಂದುವರೆಯಲು ಹೇಳಿತ್ತು. ಆದರೆ, ಈಗ ದೌರ್ಜನ್ಯ ಹೆಚ್ಚಾಗಿರುವ ಕಾರಣ ಪೂಂಗೊಥೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಪಂಚಾಯತ್ ಅಧ್ಯಕ್ಷೆ ಪೂಂಗೊಥೈ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ, ಅಧ್ಯಕ್ಷರು, ಅವರ ಪತಿ ಮತ್ತು ಉಪಾಧ್ಯಕ್ಷರ ನಡುವಿನ ಜಗಳದ ಆರೋಪಗಳಿವೆ. ವಿವರವಾದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯ” ಎಂದು ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾವು ಪೂಂಗೊಥೈಯನ್ನು ಸಂಪರ್ಕಿಸಿದ್ದು, ಅವರ ಪತಿ ಶಶಿಕುಮಾರ್ ಕರೆ ಸ್ವೀಕರಿಸಿ “ಆಕೆ ಖಿನ್ನತೆಗೆ ಒಳಗಾಗಿದ್ದಾಳೆ. ಮಾತನಾಡುವ ಸ್ಥಿತಿಯಲ್ಲಿ ಇಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪಂಚಾಯತ್ ಉಪಾಧ್ಯಕ್ಷ ಹಾಗೂ ಡಿಎಂಕೆ ಯೂನಿಯನ್ ಕಾರ್ಯದರ್ಶಿ ಮರಿವಣ್ಣಮುತ್ತು ಅವರು ಜಾತಿಯ ಕಾರಣಕ್ಕಾಗಿ ಪೂಂಗೊಥೈ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಆಕೆಗೆ ಕಚೇರಿಯಲ್ಲಿ ಕೂರಲು ಸರಿಯಾದ ಕುರ್ಚಿ, ಮೇಜು ಕೂಡ ನೀಡಿಲ್ಲ. ಇತ್ತೀಚೆಗೆ ಮರಿವಣ್ಣಮುತ್ತು ಅವರ ಬೆಂಬಲಿಗರೊಬ್ಬರು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ನಮ್ಮ ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್, ಸಂಸದೆ ಕನಿಮೊಳಿ ಮತ್ತು ಪಕ್ಷದ ಜಂಟಿ ಸಂಘಟನಾ ಕಾರ್ಯದರ್ಶಿ ಅನ್ಬಗಂ ಕಲೈ ಅವರ ಬಳಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ” ಎಂದು ಶಶಿಕುಮಾರ್ ವಿವರಿಸಿದ್ದಾರೆ ಎಂದು ವರದಿ ಹೇಳಿದೆ.

ಆದರೆ, ಎಲ್ಲಾ ಆರೋಪಗಳನ್ನು ಪಂಚಾಯತ್ ಉಪಾಧ್ಯಕ್ಷ ಮರಿವಣ್ಣಮುತ್ತು ನಿರಾಕರಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅವರು “ನಾನು ಕಳೆದ 25 ವರ್ಷಕ್ಕಿಂತ ಹೆಚ್ಚು ಕಾಲ ಡಿಎಂಕೆಯ ಯೂನಿಯನ್ ಕಾರ್ಯದರ್ಶಿಯಾಗಿದ್ದೇನೆ ಮತ್ತು ಎರಡು ಬಾರಿ ಪಪ್ಪಕುಡಿ ಪಂಚಾಯತ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸುತ್ತೇನೆ. ಪೂಂಗೊಥೈ ಅಥವಾ ಯಾರನ್ನೂ ಅವರ ಜಾತಿಯ ಆಧಾರದ ಮೇಲೆ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದಿದ್ದಾರೆ.

“ಕೌನ್ಸಿಲರ್‌ಗಳು ಯಾವುದೇ ಆರ್ಥಿಕ ಪ್ರತಿಫಲವನ್ನು ನಿರೀಕ್ಷಿಸದೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಆದರೆ, ಅವರ ಪತಿ ಅವರ ಅಧಿಕೃತ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೆಲವು ಕೈಗಾರಿಕೆಗಳಿಂದ ಹಣಕ್ಕಾಗಿಯೂ ಬೇಡಿಕೆ ಇಟ್ಟಿದ್ದರು. ನಾನು ಅವರ ಕ್ರಮವನ್ನು ವಿರೋಧಿಸಿದ್ದರಿಂದ ಅವರು ಈಗ ನನ್ನ ವಿರುದ್ಧ ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ” ಎಂದು ಮರಿವಣ್ಣಮುತ್ತು ಹೇಳಿದ್ದಾರೆ.

ಎರಡು ವಾರದೊಳಗೆ ಎರಡು ಪ್ರಕರಣ :

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ದೌರ್ಜನ್ಯ ಆರೋಪದ ಮಾಡಿದ ಎರಡನೇ ಪ್ರಕರಣ ಇದಾಗಿದೆ.

ಅಕ್ಟೋಬರ್ 3ರಂದು ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದರು.

ಆ ಕುರಿತ ವರದಿ ಇಲ್ಲಿದೆ- ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...