Homeಮುಖಪುಟತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಆರೋಪಿಸಿ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಪ್ಪಕುಡಿ ಗ್ರಾಮ ಪಂಚಾಯತ್‌ನ ಡಿಎಂಕೆ ಬೆಂಬಲಿತ ಅಧ್ಯಕ್ಷೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿನ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ತಾರತಮ್ಯ ಆರೋಪ ಮಾಡಿರುವ ಬಗ್ಗೆ ಸುದ್ದಿಯಾಗಿರುವ ಎರಡನೇ ಪ್ರಕರಣ ಇದಾಗಿದೆ.

ಪಪ್ಪಕುಡಿ ಪಂಚಾಯತ್‌ನ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಅಧ್ಯಕ್ಷೆ ಪೂಂಗೊಥೈ ಶಶಿಕುಮಾರ್ ಅವರು ಇತ್ತೀಚೆಗೆ ತಿರುನಲ್ವೇಲಿ ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಮತ್ತು ಡಿಎಂಕೆ ನಾಯಕರಿಗೆ ತನ್ನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅತಿ ಹಿಂದುಳಿದ ವರ್ಗದವರಾದ ಪಂಚಾಯತ್ ಉಪಾಧ್ಯಕ್ಷರು ಜಾತಿ ಆಧಾರಿತ ತಾರತಮ್ಯ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ಪೂಂಗೊಥೈ ಶಶಿಕುಮಾರ್ ಅವರು ಜಾತಿ ತಾರತಮ್ಯ ಆರೋಪಿಸಿ ಎರಡು ವರ್ಷಗಳ ಹಿಂದೆ ತಮ್ಮ ಹುದ್ದೆಯನ್ನು ತ್ಯಜಿಸಲು ಮುಂದಾಗಿದ್ದರು. ಅಂದಿನ ಕಲೆಕ್ಟರ್ ವಿ ವಿಷ್ಣು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆದರೆ, ಡಿಎಂಕೆ ಪಕ್ಷದ ನಾಯಕತ್ವವು ಪೂಂಗೊಥೈ ಅವರ ಮನವೊಲಿಸಿ ಮುಂದುವರೆಯಲು ಹೇಳಿತ್ತು. ಆದರೆ, ಈಗ ದೌರ್ಜನ್ಯ ಹೆಚ್ಚಾಗಿರುವ ಕಾರಣ ಪೂಂಗೊಥೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಪಂಚಾಯತ್ ಅಧ್ಯಕ್ಷೆ ಪೂಂಗೊಥೈ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ, ಅಧ್ಯಕ್ಷರು, ಅವರ ಪತಿ ಮತ್ತು ಉಪಾಧ್ಯಕ್ಷರ ನಡುವಿನ ಜಗಳದ ಆರೋಪಗಳಿವೆ. ವಿವರವಾದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯ” ಎಂದು ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾವು ಪೂಂಗೊಥೈಯನ್ನು ಸಂಪರ್ಕಿಸಿದ್ದು, ಅವರ ಪತಿ ಶಶಿಕುಮಾರ್ ಕರೆ ಸ್ವೀಕರಿಸಿ “ಆಕೆ ಖಿನ್ನತೆಗೆ ಒಳಗಾಗಿದ್ದಾಳೆ. ಮಾತನಾಡುವ ಸ್ಥಿತಿಯಲ್ಲಿ ಇಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪಂಚಾಯತ್ ಉಪಾಧ್ಯಕ್ಷ ಹಾಗೂ ಡಿಎಂಕೆ ಯೂನಿಯನ್ ಕಾರ್ಯದರ್ಶಿ ಮರಿವಣ್ಣಮುತ್ತು ಅವರು ಜಾತಿಯ ಕಾರಣಕ್ಕಾಗಿ ಪೂಂಗೊಥೈ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಆಕೆಗೆ ಕಚೇರಿಯಲ್ಲಿ ಕೂರಲು ಸರಿಯಾದ ಕುರ್ಚಿ, ಮೇಜು ಕೂಡ ನೀಡಿಲ್ಲ. ಇತ್ತೀಚೆಗೆ ಮರಿವಣ್ಣಮುತ್ತು ಅವರ ಬೆಂಬಲಿಗರೊಬ್ಬರು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ನಮ್ಮ ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್, ಸಂಸದೆ ಕನಿಮೊಳಿ ಮತ್ತು ಪಕ್ಷದ ಜಂಟಿ ಸಂಘಟನಾ ಕಾರ್ಯದರ್ಶಿ ಅನ್ಬಗಂ ಕಲೈ ಅವರ ಬಳಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ” ಎಂದು ಶಶಿಕುಮಾರ್ ವಿವರಿಸಿದ್ದಾರೆ ಎಂದು ವರದಿ ಹೇಳಿದೆ.

ಆದರೆ, ಎಲ್ಲಾ ಆರೋಪಗಳನ್ನು ಪಂಚಾಯತ್ ಉಪಾಧ್ಯಕ್ಷ ಮರಿವಣ್ಣಮುತ್ತು ನಿರಾಕರಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅವರು “ನಾನು ಕಳೆದ 25 ವರ್ಷಕ್ಕಿಂತ ಹೆಚ್ಚು ಕಾಲ ಡಿಎಂಕೆಯ ಯೂನಿಯನ್ ಕಾರ್ಯದರ್ಶಿಯಾಗಿದ್ದೇನೆ ಮತ್ತು ಎರಡು ಬಾರಿ ಪಪ್ಪಕುಡಿ ಪಂಚಾಯತ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸುತ್ತೇನೆ. ಪೂಂಗೊಥೈ ಅಥವಾ ಯಾರನ್ನೂ ಅವರ ಜಾತಿಯ ಆಧಾರದ ಮೇಲೆ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದಿದ್ದಾರೆ.

“ಕೌನ್ಸಿಲರ್‌ಗಳು ಯಾವುದೇ ಆರ್ಥಿಕ ಪ್ರತಿಫಲವನ್ನು ನಿರೀಕ್ಷಿಸದೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಆದರೆ, ಅವರ ಪತಿ ಅವರ ಅಧಿಕೃತ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೆಲವು ಕೈಗಾರಿಕೆಗಳಿಂದ ಹಣಕ್ಕಾಗಿಯೂ ಬೇಡಿಕೆ ಇಟ್ಟಿದ್ದರು. ನಾನು ಅವರ ಕ್ರಮವನ್ನು ವಿರೋಧಿಸಿದ್ದರಿಂದ ಅವರು ಈಗ ನನ್ನ ವಿರುದ್ಧ ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ” ಎಂದು ಮರಿವಣ್ಣಮುತ್ತು ಹೇಳಿದ್ದಾರೆ.

ಎರಡು ವಾರದೊಳಗೆ ಎರಡು ಪ್ರಕರಣ :

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ದೌರ್ಜನ್ಯ ಆರೋಪದ ಮಾಡಿದ ಎರಡನೇ ಪ್ರಕರಣ ಇದಾಗಿದೆ.

ಅಕ್ಟೋಬರ್ 3ರಂದು ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದರು.

ಆ ಕುರಿತ ವರದಿ ಇಲ್ಲಿದೆ- ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...