Homeಮುಖಪುಟಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು - ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

"ಅವರಿಗೆ (ಕಮಲ್ ಹಾಸನ್) ರಾಜಕೀಯದ ಬಗ್ಗೆ ಏನು ಗೊತ್ತು? ಅವರು ಬಿಗ್ ಬಾಸ್ ನಡೆಸುತ್ತಾರೆ. ಅವುಗಳನ್ನು ನೋಡಿದರೆ ಮಕ್ಕಳು ಮಾತ್ರವಲ್ಲ, ಕುಟುಂಬಗಳೇ ಹಾಳಾಗುತ್ತವೆ"

- Advertisement -
- Advertisement -

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಮೊದಲೇ ಕಾವೇರುತ್ತಿದ್ದು ರಾಜಕೀಯ ಪಕ್ಷಗಳು ಈಗಲೆ ಕಾದಾಟಕ್ಕಿಳಿದಿವೆ. ಈ ನಿಟ್ಟಿನಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕಮಲ್ ಹಾಸನ್‌ ಅವರ ರಿಯಾಲಿಟಿ ಶೋ ‘ಬಿಗ್ ಬಾಸ್’ ಅನ್ನು ಉಲ್ಲೇಖಿಸಿ, “ಮಕ್ಕಳ್‌ ನೀದಿಮಯಂ (ಎಂಎನ್‌ಎಂ) ಪಕ್ಷದ ಸ್ಥಾಪಕ ಕಮಲ್ ಹಾಸನ್ ಬಿಗ್‌ಬಾಸ್ ನಡೆಸುತ್ತಾರೆ. ಅವರಿಗೆ ರಾಜಕೀಯದ ಬಗ್ಗೆ ಎನು ಗೊತ್ತು” ಎಂದು ಟೀಕಿಸಿದ್ದಾರೆ.

ಕಮಲ್ ಹಾಸನ್ ಇತ್ತೀಚೆಗೆ, ಎಐಎಡಿಎಂಕೆ ಸ್ಥಾಪಕ, ಮಾಜಿ ಮುಖ್ಯಮಂತ್ರಿ ದಿ. ಎಂ.ಜಿ. ರಾಮಚಂದ್ರನ್ ಅವರ ಪರಂಪರೆಯ ಬಗ್ಗೆ ಪ್ರಸ್ತಾಪಿಸಿ, ಸರ್ಕಾರವನ್ನು ಟೀಕಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಪಳನಿಸ್ವಾಮಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

 

ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ಇದಕ್ಕೆ ತಿರುಗೇಟು ಕಮಲ್ ಹಾಸನ್, “ಮುಖ್ಯಮಂತ್ರಿಯವರೂ ರಿಯಾಲಿಟಿ ಶೋವನ್ನು ನೋಡಿದ್ದಾರೆಂದರೆ ಬಹಳ ಸಂತೋಷ” ಎಂದು ಹೇಳಿದ್ದಾರೆ.

ಕಮಲ್ ಹಾಸನ್ ರಾಜಕೀಯ ಪಕ್ಷ ಸ್ಥಾಪಿಸಿರುವ ಬಗ್ಗೆ ಉಲ್ಲೇಖಿಸಿದ್ದ ಪಳನಿಸ್ವಾಮಿ, “ಅವರಿಗೆ (ಕಮಲ್ ಹಾಸನ್) ರಾಜಕೀಯದ ಬಗ್ಗೆ ಏನು ಗೊತ್ತು? ಅವರು ಬಿಗ್‌ಬಾಸ್ ನಡೆಸುತ್ತಾರೆ. ಅವುಗಳನ್ನು ನೋಡಿದರೆ ಮಕ್ಕಳು ಮಾತ್ರವಲ್ಲ, ಕುಟುಂಬಗಳೇ ಹಾಳಾಗುತ್ತವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಸಿದ್ದಾಂತ ಹೊಂದಿಕೆಯಾದರೆ ರಜನಿಕಾಂತ್‌ ಜೊತೆ ಮೈತ್ರಿಗೆ ಸಿದ್ದ: ಕಮಲ್ ಹಾಸನ್

ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಅವರ ಪಕ್ಷ ಘೋಷಿಸಿದೆ. ಜೊತೆಗೆ ರಜನಿಕಾಂತ್ ಅವರ ಪಕ್ಷವೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಇನ್ನು ಕಮಲ್ ಹಾಸನ್ ಅವರೇ ಹೇಳಿರುವಂತೆ ಸಿದ್ಧಾಂತ ಹೊಂದಿಕೆಯಾಗುವುದಾದರೆ, ಜನತೆಗೆ ಉಪಯೋಗವಾಗುವುದಾದರೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದೂ ಹೇಳಿದ್ದಾರೆ.

ಒಟ್ಟಾರೆ ತಮಿಳುನಾಡಿನ ರಾಜಕೀಯ ಕಣ ರಂಗೇರುತ್ತಿದ್ದು ಯಾರಿಗೆ ಲಾಭವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...