Homeಮುಖಪುಟಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ತಮಿಳು, ಬಂಗಾಳಿ ಮತ್ತು ಮರಾಠಿ ಸೇರಿದಂತೆ 7 ಭಾಷೆಗಳಿಗೆ ವಾರ್ಷಿಕ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾನುವಾರ ಘೋಷಿಸಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮಿಳುನಾಡು ಸರ್ಕಾರದ ಆಶ್ರಯದಲ್ಲಿ ನೀಡಲಾಗುವ ಈ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಇದನ್ನು ‘ಸೆಮ್ಮೋಳಿ ಇಲ್ಲಕಿಯ ವಿರುಧು” (ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ) ಎಂದು ಹೆಸರಿಸಲಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು.

ಚೆನ್ನೈ ಅಂತರರಾಷ್ಟ್ರೀಯ ಪುಸ್ತಕ ಮೇಳದ (ಸಿಐಬಿಎಫ್‌-2026) ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, “ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ಘೋಷಣೆಯನ್ನು ಇತ್ತೀಚೆಗೆ ರದ್ದುಪಡಿಸಲಾಗಿದೆ, ಇದರಿಂದ ಸಾಕಾಷ್ಟು ಅನಾನುಕೂಲಕರವಾಗಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಹಸ್ತಕ್ಷೇಪದಿಂದಾಗಿ ಈ ಬೆಳವಣಿಗೆ ಸಂಭವಿಸಿದೆ” ಎಂದು ಅವರು ಆರೋಪಿಸಿದರು.

ಪ್ರಶಸ್ತಿಗಳ ಮೇಲಿನ ಅನಿಶ್ಚಿತತೆಯನ್ನು ಒತ್ತಿ ಹೇಳಿದ ಅವರು, “ಕಲೆ ಮತ್ತು ಸಾಹಿತ್ಯ ಪ್ರಶಸ್ತಿಗಳಲ್ಲಿಯೂ ಸಹ ರಾಜಕೀಯ ಹಸ್ತಕ್ಷೇಪಗಳು ಅಪಾಯಕಾರಿ” ಎಂದು ಅವರು ಹೇಳಿದರು. ಅಂತಹ ಸಂದರ್ಭಗಳಲ್ಲಿ, ಹಲವಾರು ಬರಹಗಾರರು ಮತ್ತು ಕಲಾ/ಸಾಹಿತ್ಯ ಸಂಸ್ಥೆಗಳ ಪ್ರತಿನಿಧಿಗಳು ಸೂಕ್ತ, ರಚನಾತ್ಮಕ, ಪ್ರತಿ-ಕ್ರಿಯಾ ಯೋಜನೆಗಾಗಿ ತಮ್ಮಲ್ಲಿ ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

“ಇದು ಈ ಸಮಯದ ಅಗತ್ಯವಾಗಿದೆ ಎಂದು ನಮಗೆ ಅರಿವಾಗಿದೆ, ನಿಮ್ಮೆಲ್ಲರನ್ನು ಸಂತೋಷಪಡಿಸುವ ಘೋಷಣೆಯನ್ನು ನಾನು ಮಾಡಲು ಬಯಸುತ್ತೇನೆ. ಅದರಂತೆ, ಪ್ರತಿ ವರ್ಷ ತಮಿಳುನಾಡು ಸರ್ಕಾರದ ಪರವಾಗಿ, ಆಯ್ದ ಭಾರತೀಯ ಭಾಷೆಗಳಲ್ಲಿನ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ರಾಷ್ಟ್ರೀಯ ಮಟ್ಟ ಪ್ರಶಸ್ತಿಗಳನ್ನು ನೀಡಲಾಗುವುದು” ಎಂದು ಅವರು ಹೇಳಿದರು.

“ಪ್ರಶಸ್ತಿ ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ‘ಸೆಮ್ಮೊಳಿ ಇಲ್ಲಕಿಯ ವಿರುಧು’ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರತಿ ಭಾಷೆಗೆ ಪ್ರಶಸ್ತಿಯು ರೂ. 5 ಲಕ್ಷ ನಗದು ಬಹುಮಾನವನ್ನು ಹೊಂದಿರುತ್ತದೆ. ತಮಿಳುನಾಡು ಸರ್ಕಾರವು ಪೋಷಕರ ಪಾತ್ರವನ್ನು ಸಂತೋಷದಿಂದ ನಿರ್ವಹಿಸುತ್ತದೆ. ಆಯ್ಕೆ ಪ್ರಕ್ರಿಯೆಯ ಕಾರ್ಯವನ್ನು ಸ್ವತಂತ್ರ ತಜ್ಞರಿಗೆ ಹಸ್ತಾಂತರಿಸುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

“ಸಾಹಿತ್ಯ ಕೃತಿಗಳ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಪ್ರತಿ ಭಾಷೆಗೆ (ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು) ಹೆಸರಾಂತ ಬರಹಗಾರರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲಾಗುವುದು. ಇದಲ್ಲದೆ, ತಮ್ಮ ನೇತೃತ್ವದ ದ್ರಾವಿಡ ಮಾದರಿ ಸರ್ಕಾರವು ಪ್ರತಿ ಮನೆಗೂ ಜ್ಞಾನವನ್ನು ಕೊಂಡೊಯ್ಯಲು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ. ಪುಸ್ತಕ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದು ಅವರು ಹೇಳಿದರು.

ಈ ಪುಸ್ತಕ ಮೇಳದಲ್ಲಿ, ಅನುವಾದಗಳು ಮತ್ತು ಹಕ್ಕುಸ್ವಾಮ್ಯ ವಿನಿಮಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...