Homeಮುಖಪುಟತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಸಿಬಿಐ ಹೇಳಿದೆ.

- Advertisement -
- Advertisement -

ಕಳೆದ ಜೂನ್‌ನಲ್ಲಿ ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಲಾಕಪ್ ಡೆತ್  ಪ್ರಕರಣದಲ್ಲಿ ಪೊಲೀಸರು ಸತತ ಆರುಗಂಟೆಗಳ ಕಾಲ ಇಬ್ಬರನ್ನು ಹಿಂಸಿದ್ದಾರೆ ಎಂದು ಸಿಬಿಐ ದೃಢಪಡಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ  ಜೈಲಿನಲ್ಲೇ ಮೃತಪಟ್ಟಿದ್ದರು.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಇವರಿಬ್ಬರನ್ನು “ಸಂಜೆ 7.45 ರಿಂದ ಮುಂಜಾನೆ 3 ಗಂಟೆಯ ವರೆಗೂ ಹಲವಾರು ಬಾರಿ ಕ್ರೂರ ಚಿತ್ರಹಿಂಸೆಗೊಳಪಡಿಸಲಾಗಿದೆ” ಎಂದು ಹೇಳಿದೆ. ತಂದೆ-ಮಗನನ್ನು ಎಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು ಎಂದರೆ, ಪೊಲೀಸ್ ಠಾಣೆಯ ಗೋಡೆಗಳ ಮೇಲೆಲ್ಲಾ ರಕ್ತ ಚೆಲ್ಲಿತ್ತು ಎಂದು ವಿಧಿವಿಜ್ಞಾನದ ಸಾಕ್ಷ್ಯಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಚಿತ್ರಹಿಂಸೆಯಿಂದಾದ ಗಾಯಗಳು ಬೆನ್ನಿಕ್ಸ್‌ ಸಾವಿಗೆ ಕಾರಣವಾಗಿವೆ ಎಂದು ಮರಣೋತ್ತರ ವರದಿಯಲ್ಲಿ ತಿಳಿಸಲಾಗಿದೆ. ಚಿತ್ರಹಿಂಸೆಯಿಂದ  ಪೊಲೀಸ್ ಠಾಣೆಯಲ್ಲಿ ಚೆಲ್ಲಿದ ರಕ್ತದ ಕಲೆಗಳನ್ನು ತನ್ನದೆ ಬಟ್ಟೆಯಲ್ಲಿ ಒರೆಸಲು ಬೆನ್ನಿಕ್ಸ್‌ಗೆ ಪೊಲೀಸರು ಒತ್ತಾಯಿಸಿದ್ದರು.

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ.

ಪೊಲೀಸರು ಸಾಕ್ಷಿಗಳನ್ನು ನಾಶಪಡಿಸಿದರು. ರಕ್ತದಿಂದ ತುಂಬಿದ್ದ ತಂದೆ ಮತ್ತು ಮಗನ ಬಟ್ಟೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

“ಬೆನ್ನಿಕ್ಸ್ ಮತ್ತು ಜಯರಾಜ್ ಅವರಿಗೆ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಜೂನ್ 19 ಮತ್ತು20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಕ್ರೂರ ಚಿತ್ರಹಿಂಸೆ ಮಾಡಿದ್ದಾರೆ ಎಂಬ ಅಂಶವು ದೃಢಪಟ್ಟಿದೆ” ಎಂದು ಸಿಬಿಐ ತಿಳಿಸಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ಇಬ್ಬರಿಗೂ ಚಿತ್ರಹಿಂಸೆ ನೀಡಿದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ರೀತಿ ಸೆಟ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ತಿಳಿಸಿದ್ದರು.

ಲಾಕಪ್ ಡೆತ್ ಪ್ರಕರಣ ರಾಷ್ಟ್ರವ್ಯಾಪಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಅಭಿಯಾನವನ್ನು ಆರಂಭವಾಗಿತ್ತು. ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...