Homeಮುಖಪುಟತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಸಿಬಿಐ ಹೇಳಿದೆ.

- Advertisement -
- Advertisement -

ಕಳೆದ ಜೂನ್‌ನಲ್ಲಿ ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಲಾಕಪ್ ಡೆತ್  ಪ್ರಕರಣದಲ್ಲಿ ಪೊಲೀಸರು ಸತತ ಆರುಗಂಟೆಗಳ ಕಾಲ ಇಬ್ಬರನ್ನು ಹಿಂಸಿದ್ದಾರೆ ಎಂದು ಸಿಬಿಐ ದೃಢಪಡಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ  ಜೈಲಿನಲ್ಲೇ ಮೃತಪಟ್ಟಿದ್ದರು.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಇವರಿಬ್ಬರನ್ನು “ಸಂಜೆ 7.45 ರಿಂದ ಮುಂಜಾನೆ 3 ಗಂಟೆಯ ವರೆಗೂ ಹಲವಾರು ಬಾರಿ ಕ್ರೂರ ಚಿತ್ರಹಿಂಸೆಗೊಳಪಡಿಸಲಾಗಿದೆ” ಎಂದು ಹೇಳಿದೆ. ತಂದೆ-ಮಗನನ್ನು ಎಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು ಎಂದರೆ, ಪೊಲೀಸ್ ಠಾಣೆಯ ಗೋಡೆಗಳ ಮೇಲೆಲ್ಲಾ ರಕ್ತ ಚೆಲ್ಲಿತ್ತು ಎಂದು ವಿಧಿವಿಜ್ಞಾನದ ಸಾಕ್ಷ್ಯಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಚಿತ್ರಹಿಂಸೆಯಿಂದಾದ ಗಾಯಗಳು ಬೆನ್ನಿಕ್ಸ್‌ ಸಾವಿಗೆ ಕಾರಣವಾಗಿವೆ ಎಂದು ಮರಣೋತ್ತರ ವರದಿಯಲ್ಲಿ ತಿಳಿಸಲಾಗಿದೆ. ಚಿತ್ರಹಿಂಸೆಯಿಂದ  ಪೊಲೀಸ್ ಠಾಣೆಯಲ್ಲಿ ಚೆಲ್ಲಿದ ರಕ್ತದ ಕಲೆಗಳನ್ನು ತನ್ನದೆ ಬಟ್ಟೆಯಲ್ಲಿ ಒರೆಸಲು ಬೆನ್ನಿಕ್ಸ್‌ಗೆ ಪೊಲೀಸರು ಒತ್ತಾಯಿಸಿದ್ದರು.

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ.

ಪೊಲೀಸರು ಸಾಕ್ಷಿಗಳನ್ನು ನಾಶಪಡಿಸಿದರು. ರಕ್ತದಿಂದ ತುಂಬಿದ್ದ ತಂದೆ ಮತ್ತು ಮಗನ ಬಟ್ಟೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

“ಬೆನ್ನಿಕ್ಸ್ ಮತ್ತು ಜಯರಾಜ್ ಅವರಿಗೆ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಜೂನ್ 19 ಮತ್ತು20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಕ್ರೂರ ಚಿತ್ರಹಿಂಸೆ ಮಾಡಿದ್ದಾರೆ ಎಂಬ ಅಂಶವು ದೃಢಪಟ್ಟಿದೆ” ಎಂದು ಸಿಬಿಐ ತಿಳಿಸಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ಇಬ್ಬರಿಗೂ ಚಿತ್ರಹಿಂಸೆ ನೀಡಿದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ರೀತಿ ಸೆಟ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ತಿಳಿಸಿದ್ದರು.

ಲಾಕಪ್ ಡೆತ್ ಪ್ರಕರಣ ರಾಷ್ಟ್ರವ್ಯಾಪಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಅಭಿಯಾನವನ್ನು ಆರಂಭವಾಗಿತ್ತು. ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...