Homeಮುಖಪುಟತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಸಿಬಿಐ ಹೇಳಿದೆ.

- Advertisement -
- Advertisement -

ಕಳೆದ ಜೂನ್‌ನಲ್ಲಿ ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಲಾಕಪ್ ಡೆತ್  ಪ್ರಕರಣದಲ್ಲಿ ಪೊಲೀಸರು ಸತತ ಆರುಗಂಟೆಗಳ ಕಾಲ ಇಬ್ಬರನ್ನು ಹಿಂಸಿದ್ದಾರೆ ಎಂದು ಸಿಬಿಐ ದೃಢಪಡಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ  ಜೈಲಿನಲ್ಲೇ ಮೃತಪಟ್ಟಿದ್ದರು.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಇವರಿಬ್ಬರನ್ನು “ಸಂಜೆ 7.45 ರಿಂದ ಮುಂಜಾನೆ 3 ಗಂಟೆಯ ವರೆಗೂ ಹಲವಾರು ಬಾರಿ ಕ್ರೂರ ಚಿತ್ರಹಿಂಸೆಗೊಳಪಡಿಸಲಾಗಿದೆ” ಎಂದು ಹೇಳಿದೆ. ತಂದೆ-ಮಗನನ್ನು ಎಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು ಎಂದರೆ, ಪೊಲೀಸ್ ಠಾಣೆಯ ಗೋಡೆಗಳ ಮೇಲೆಲ್ಲಾ ರಕ್ತ ಚೆಲ್ಲಿತ್ತು ಎಂದು ವಿಧಿವಿಜ್ಞಾನದ ಸಾಕ್ಷ್ಯಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಚಿತ್ರಹಿಂಸೆಯಿಂದಾದ ಗಾಯಗಳು ಬೆನ್ನಿಕ್ಸ್‌ ಸಾವಿಗೆ ಕಾರಣವಾಗಿವೆ ಎಂದು ಮರಣೋತ್ತರ ವರದಿಯಲ್ಲಿ ತಿಳಿಸಲಾಗಿದೆ. ಚಿತ್ರಹಿಂಸೆಯಿಂದ  ಪೊಲೀಸ್ ಠಾಣೆಯಲ್ಲಿ ಚೆಲ್ಲಿದ ರಕ್ತದ ಕಲೆಗಳನ್ನು ತನ್ನದೆ ಬಟ್ಟೆಯಲ್ಲಿ ಒರೆಸಲು ಬೆನ್ನಿಕ್ಸ್‌ಗೆ ಪೊಲೀಸರು ಒತ್ತಾಯಿಸಿದ್ದರು.

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ.

ಪೊಲೀಸರು ಸಾಕ್ಷಿಗಳನ್ನು ನಾಶಪಡಿಸಿದರು. ರಕ್ತದಿಂದ ತುಂಬಿದ್ದ ತಂದೆ ಮತ್ತು ಮಗನ ಬಟ್ಟೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

“ಬೆನ್ನಿಕ್ಸ್ ಮತ್ತು ಜಯರಾಜ್ ಅವರಿಗೆ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಜೂನ್ 19 ಮತ್ತು20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಕ್ರೂರ ಚಿತ್ರಹಿಂಸೆ ಮಾಡಿದ್ದಾರೆ ಎಂಬ ಅಂಶವು ದೃಢಪಟ್ಟಿದೆ” ಎಂದು ಸಿಬಿಐ ತಿಳಿಸಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ಇಬ್ಬರಿಗೂ ಚಿತ್ರಹಿಂಸೆ ನೀಡಿದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ರೀತಿ ಸೆಟ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ತಿಳಿಸಿದ್ದರು.

ಲಾಕಪ್ ಡೆತ್ ಪ್ರಕರಣ ರಾಷ್ಟ್ರವ್ಯಾಪಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಅಭಿಯಾನವನ್ನು ಆರಂಭವಾಗಿತ್ತು. ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...